Breaking News

ಸೂರ್ಯಕುಮಾರ್‌ ಯಾದವ್‌ ಆಗಮನ ವಿಳಂಬ

Spread the love

ಮುಂಬಯಿ: ಮುಂಬೈ ಇಂಡಿಯನ್ಸ್‌ ಸತತ ಸೋಲಿನ ಸುಳಿಗೆ ಸಿಲುಕಿರುವಂತೆಯೇ ತಂಡಕ್ಕೆ ಇನ್ನೊಂದು ಆಘಾತಕಾರಿ ಸುದ್ದಿ ಎದುರಾಗಿದೆ. ಸ್ಟಾರ್‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ ಆಗಮನ ಇನ್ನೂ ವಿಳಂಬವಾಗಲಿದೆ ಎಂದು ತಿಳಿದು ಬಂದಿದೆ.

ವಿಶ್ವದ ನಂ.1 ಟಿ20 ಬ್ಯಾಟರ್‌ ಆಗಿರುವ ಸೂರ್ಯಕುಮಾರ್‌ ಯಾದವ್‌ ನ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇನ್ನೂ ಸಂಪೂರ್ಣ ಚೇತರಿಕೆ ಕಂಡಿಲ್ಲ.

ಹೀಗಾಗಿ ಇವರು ಮುಂಬೈ ತಂಡ ಸೇರಿಕೊಳ್ಳುವುದು ಇನ್ನಷ್ಟು ದಿನ ವಿಳಂಬವಾಗಲಿದೆ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.

Mumbai Indians: ಸೂರ್ಯಕುಮಾರ್‌ ಯಾದವ್‌ ಆಗಮನ ವಿಳಂಬ

ಸಂಪೂರ್ಣ ಫಿಟ್‌ನೆಸ್‌ಗೆ ಮರಳಿದ ಬಳಿಕವಷ್ಟೇ ಸೂರ್ಯಕುಮಾರ್‌ ಅವರಿಗೆ ಎನ್‌ಸಿಎಯಿಂದ ಸರ್ಟಿಫಿಕೆಟ್‌ ಲಭಿಸಲಿದೆ. ಅಲ್ಲದೇ ಇವರ ವಿಷಯದಲ್ಲಿ ಬಿಸಿಸಿಐ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಲು ಸಿದ್ಧವಿಲ್ಲ. ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗೆ ಸೂರ್ಯಕುಮಾರ್‌ ಯಾದವ್‌ ಟೀಮ್‌ ಇಂಡಿಯಾ ಪಾಲಿಗೆ ಅನಿವಾರ್ಯರಾಗಿರುವುದೇ ಇದಕ್ಕೆ ಕಾರಣ. ಅವರು ಐಪಿಎಲ್‌ ಆಡದಿದ್ದರೂ ಪರ್ವಾಗಿಲ್ಲ, ಆದರೆ ವಿಶ್ವಕಪ್‌ನಿಂದ ಬೇರ್ಪಡುವಂತಿಲ್ಲ ಎಂಬುದು ಬಿಸಿಸಿಐ ನಿಲುವಾಗಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ