Breaking News

ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮ; ಕೆ.ವಿ ಗೌತಮ್ ಹೆಸರು ಘೋಷಣೆ

Spread the love

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು ಹೊರತುಪಡಿಸಿ ಕೆ.ವಿ ಗೌತಮ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ.

ಇದರೊಂದಿಗೆ ಇಬ್ಬರ ಜಗಳ ಮೂರನೇಯವರಿಗೆ ಲಾಭ ಎನ್ನುವುದು ಕೋಲಾರ ವಿಚಾರದಲ್ಲಿ ನಿಜವಾಗಿದೆ.

Loksabha Election; ಕೊನೆಗೂ ಕೋಲಾರ ಕಾಂಗ್ರೆಸ್ ಟಿಕೆಟ್ ಅಂತಿಮ; ಕೆ.ವಿ ಗೌತಮ್ ಹೆಸರು ಘೋಷಣೆ

ಕರ್ನಾಟಕದಿಂದ ಲೋಕಸಭೆಗೆ ಬಾಕಿಯಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಶುಕ್ರವಾರವೇ ಕಾಂಗ್ರೆಸ್ ಪ್ರಕಟಿಸಿತ್ತು. ಆದರೆ ಕೋಲಾರವೇ ಕಗ್ಗಂಟಾಗಿತ್ತು.

ಪರಿಶಿಷ್ಟ ಜಾತಿ ಎಡಗೈ ಸಮುದಾಯಕ್ಕೆ ಸೇರಿದ ಮಾಜಿ ಮೇಯರ್‌ ವಿಜಯಕುಮಾರ್‌ ಪುತ್ರ ಗೌತಮ್‌ ಅವರಿಗೆ ಕೋಲಾರ ಟಿಕೆಟ್ ಸಿಕ್ಕಿದೆ. ಇಂದು ಅಧಿಕೃತವಾಗಿ ಘೋಷಣೆಯಾಗಿದೆ.

ಸಚಿವ ಕೆ.ಎಚ್ ಮುನಿಯಪ್ಪ ಮತ್ತು ಮಾಜಿ ಸಚಿವ ಕೆ.ಆರ್ ರಮೇಶ್ ಕುಮಾರ್ ಬಣಗಳ ನಡುವಿನ ಹಗ್ಗಜಗ್ಗಾಟಕ್ಕೆ ಕಾಂಗ್ರೆಸ್ ಈ ಮೂಲಕ ಉತ್ತರ ಕಂಡುಕೊಂಡಿದೆ.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ