Breaking News
Home / ಜಿಲ್ಲೆ / ಬೆಂಗಳೂರು / ಲಿಂಗಾಯತ ಅಭಿವೃದ್ಧಿಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ.:ಹೊರಟ್ಟಿ,ಎಂ.ಬಿ.ಪಾಟೀಲ್

ಲಿಂಗಾಯತ ಅಭಿವೃದ್ಧಿಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ.:ಹೊರಟ್ಟಿ,ಎಂ.ಬಿ.ಪಾಟೀಲ್

Spread the love

ಬೆಂಗಳೂರು, ನ. 15: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನೆಲ್ಲೆ ಲಿಂಗಾಯತ ಅಭಿವೃದ್ಧಿ ನಿಗಮ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ.

ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶೀಘ್ರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಪತ್ರ ಬರೆಯುವ ಮುಖಾಂತರ ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಮಹಾರಾಷ್ಟ್ರದಲ್ಲಿ ಮರಾಠಾ ಸಮುದಾಯಕ್ಕೆ ಶೇ.16 ರಷ್ಟು ಮೀಸಲಾತಿಯನ್ನು ಅಲ್ಲಿನ ಸರಕಾರ ನೀಡಿದೆ. ಇದರಿಂದ ಆ ಸಮುದಾಯ ಎಲ್ಲ ರೀತಿಯ ಅನುಕೂಲತೆಗಳನ್ನು ಪಡೆಯುತ್ತಿದೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಿರುವ ಲಿಂಗಾಯತರಿಗೆ ಶೇ.16 ರಷ್ಟು ಮೀಸಲಾತಿಯನ್ನು ಕೊಡುವುದು ನ್ಯಾಯೋಚಿತವಾಗಿದೆ ಎಂದು ಬಸವರಾಜ್ ಹೊರಟ್ಟಿ ತಿಳಿಸಿದ್ದಾರೆ.

ರಾಜ್ಯದ 6.5ಕೋಟಿ ಜನಸಂಖ್ಯೆಯ ಪೈಕಿ ಲಿಂಗಾಯತರ ಜನಸಂಖ್ಯೆ ಒಂದು ಕೋಟಿಗಿಂತೂ ಹೆಚ್ಚಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಆದ್ದರಿಂದ ನೆರೆಯ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕೂಡ ಲಿಂಗಾಯತರಿಗೆ ಶೇ.16-18ರಷ್ಟು ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ನೀಡುವ ಮೂಲಕ ಲಿಂಗಾಯತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಕೋರುತ್ತೇನೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ