ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಆದೇಶ ವಾಪಾಸ್ ಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಅಧ್ಯಕ್ಷ ಪ್ರವೀಣ್ ಶೆಟ್ಟಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಇಂದು ಮರಾಠರು ನಾಳೆ ಮಾರವಾಡಿಗಳು, ತಮಿಳರು ಹೀಗೆ ಸರಕಾರ ಬೇರೆಯವರಿಗೆ ಪ್ರಾಧಿಕಾರ ರಚನೆ ಮಾಡಲು ಮುಂದಾಗಿದೆ. ಇದು ಎಷ್ಟರ ಮಟ್ಟಿಗೆ ಸರಿ, ಸರಕಾರ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು. ಮರಾಠಿಗರು ಕನ್ನಡ ರಾಜ್ಯೋತ್ಸವದ ದಿನದಂದು ಕಪ್ಪು ಬಾವುಟ ಪ್ರದರ್ಶಿಸುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Laxmi News 24×7