ನವದೆಹಲಿ: ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ಕೆಸರೆರಚಾಟ ಸಾಮಾನ್ಯ. ಆದಾಗ್ಯೂ, ಕೆಲವು ನಾಯಕರು ಹೇಳುವ ಹೇಳಿಕೆ, ಭರವಸೆ ಮಾತ್ರ ಚುನಾವಣೆಯಲ್ಲಿ ಗೆಲ್ಲ ಬೇಕು ಎನ್ನುವ ಗುರಿಯಾಗಿರುತ್ತದೆ. ಇದಕದ್ಕೆ ಉತ್ತಮ ಉದಾಹರಣೆ ಎನ್ನುವಂತೆ ಡಿಎಂಕೆ ನಾಯಕರೊಬ್ಬರು ಆಡಿದ್ದು, ತಮಿಳುನಾಡಿನಲ್ಲಿ ದೊಡ್ಡ ಮಟ್ಟದಲ್ಲಿ ವೈರಲ್ ಆಗಿದೆ.
ಡಿಎಂಕೆ ಪಕ್ಷದ ನಾಯಕರೊಬ್ಬರು, ಹಾಗೇನಾದರೂ ಮೋದಿ ಮತ್ತೊಮ್ಮೆ ಆಯ್ಕೆಯಾದಲ್ಲಿ ನಿಮ್ಮ ಇಷ್ಟದ ಆಹಾರ ತಿನ್ನೋಕು ಬಿಡೋದಿಲ್ಲ ಎಂದು ಹೇಳಿದ್ದಾರೆ.
ಚೆನ್ನೈನಲ್ಲಿ ನಡೆದ ಪ್ರಚಾರದ ವೇಳೆ ಮಾತನಾಡಿದ ಡಿಎಂಕೆ ನಾಯಕರೊಬ್ಬರು, ಮೋದಿ ಮತ್ತೊಮ್ಮೆ ಆಯ್ಕೆಯಾದಲ್ಲಿ ನೀವು ಮೊಸರನ್ನ, ಸಾಂಬಾರ್ ಮಾತ್ರವೇ ತಿನ್ನಬಹುದು. ಮಟನ್, ಚಿಕನ್, ಗೋಮಾಂಸ ಹಾಗೂ ಇತರ ಯಾವುದೇ ಮಾಂಸವನ್ನು ಬ್ಯಾನ್ ಮಾಡಲಾಗುತ್ತದೆ ಎಂದು ಅಪಪ್ರಚಾರ ಮಾಡಿದ್ದಾರೆ.
ಭಾರತದ ದಕ್ಷಿಣದ ರಾಜ್ಯವಾದ ತಮಿಳುನಾಡು, ಒಟ್ಟು 39 ಸ್ಥಾನಗಳೊಂದಿಗೆ ಐದನೇ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿದೆ. ಈ ಪೈಕಿ 32 ಸೀಟುಗಳು ಮೀಸಲು ರಹಿತವಾಗಿದ್ದು, ಏಳು ಎಸ್ಸಿ ಅಭ್ಯರ್ಥಿಗಳಿಗೆ ಮೀಸಲಾಗಿದೆ. ತಮಿಳುನಾಡಿನಲ್ಲಿ ಲೋಕಸಭೆ ಚುನಾವಣೆಯ ಸಂಭ್ರಮ, ಚುನಾವಣೆ ಆರಂಭಗೊಳ್ಳುವ ಮೊದಲ ದಿನವೇ ಮುಕ್ತಾಯಗೊಳ್ಳಲಿದೆ. ತಮಿಳುನಾಡಿನ ಎಲ್ಲಾ 39 ಸ್ಥಾನಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.