Breaking News

ಕೊಳವೆಬಾವಿ ದುರಂತ: ವಿಜಯಪುರದಲ್ಲಿ ಇದೆ ಮೊದಲಲ್ಲ!

Spread the love

ವಿಜಯಪುರ: ಜಿಲ್ಲೆಯಲ್ಲಿ ಕೊಳವೆಬಾವಿ ದುರಂತ ಸಂಭವಿಸುತ್ತಿರುವುದು ಇದೆ ಮೊದಲಲ್ಲ. ಈ ಹಿಂದೆ ಇದೇ ರೀತಿ ಎರಡು ಪ್ರಕರಣಗಳು ಘಟಿಸಿದ್ದ ಕಹಿ ಅನುಭವಗಳು ಜಿಲ್ಲೆಯ ಜನರ ಸ್ಮೃತಿಪಟಲದಲ್ಲಿವೆ.

ಈ ಮೊದಲು 2008ರಲ್ಲಿ ಇಂಡಿ ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಕಾಂಚನಾ ಎಂಬ ಬಾಲಕಿ ಮತ್ತು 2014ರಲ್ಲಿ ನಾಗಠಾಣ ಸಮೀಪದ ದ್ಯಾಬೇರಿ ಗ್ರಾಮದಲ್ಲಿ, ಯಾದಗಿರಿ ಜಿಲ್ಲೆಯಿಂದ ಕೂಲಿಗೆ ಬಂದಿದ್ದ ಹನುಮಂತ ಪಾಟೀಲ ಎಂಬುವವರ ಮೂರು ವರ್ಷದ ಹೆಣ್ಣು ಮಗು ಅಕ್ಷತಾ ಕೊಳವೆಬಾವಿಗೆ ಆಕಸ್ಮಿಕವಾಗಿ ಬಿದಿದ್ದರು.

ಕೊಳವೆಬಾವಿ ದುರಂತ: ವಿಜಯಪುರದಲ್ಲಿ ಇದೆ ಮೊದಲಲ್ಲ!

ಅಂದು ಸಹ ಮಕ್ಕಳ ರಕ್ಷಣೆಗೆ ವಾರಾನುಗಟ್ಟಲೇ ಜಿಲ್ಲಾಡಳಿತದ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದ್ದರೂ ಮಕ್ಕಳನ್ನು ಜೀವಂತವಾಗಿ ಹೊರ ತರಲು ಸಾಧ್ಯವಾಗಿರಲಿಲ್ಲ.

ಜಾಗೃತಿ: ತೆರೆದ ಕೊಳವೆಬಾವಿಗಳಿಗೆ ಮಕ್ಕಳು ಬಿದ್ದು ದುರಂತ ಸಂಭವಿಸಿದ ಬಳಿಕ ಜಿಲ್ಲಾಡಳಿತ ಜನರಲ್ಲಿ ಈ ಕುರಿತು ಸಾಕಷ್ಟು ಜಾಗೃತಿ ಮೂಡಿಸಿತ್ತು. ನೀರು ಬರದೇ ವಿಫಲವಾಗಿರುವ ಕೊಳವೆಬಾವಿಗಳನ್ನು ಕಡ್ಡಾಯವಾಗಿ ಮುಚ್ಚಬೇಕು, ತೆರೆದಿಡುವಂತಿಲ್ಲ. ಒಂದು ವೇಳೆ ತೆರೆದಿಟ್ಟರೆ ಅಂತವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು. ಇಷ್ಟಾದರೂ ಜನ ಮತ್ತು ಅಧಿಕಾರಿಗಳು ಮೈಮರೆತಿರುವ ಪರಿಣಾಮ ಮತ್ತೆ ದುರಂತವೊಂದು ಸಂಭವಿಸಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ