Breaking News

ಕುರುಡುಮಲೆ ದೇವಸ್ಥಾನದಿಂದ “ಪ್ರಜಾಧ್ವನಿ-2’ಕ್ಕೆ ನಾಳೆ ಚಾಲನೆ

Spread the love

ಬೆಂಗಳೂರು: ಕೋಲಾರ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಉಂಟಾದ ಗೊಂದಲದಿಂದ ಮುಂದೂಡಲ್ಪಟ್ಟಿದ್ದ ಕಾಂಗ್ರೆಸ್‌ನ ಲೋಕಸಭಾ ಚುನಾವಣ ಪ್ರಚಾರ ಕಾರ್ಯಕ್ರಮ ಶನಿವಾರ (ಎ. 6) ನಿಗದಿಯಾಗಿದ್ದು, ಅಂದು ಕುರುಡುಮಲೆ ದೇವಸ್ಥಾನದಿಂದ “ಪ್ರಜಾಧ್ವನಿ-2’ಕ್ಕೆ ಚಾಲನೆ ದೊರೆಯಲಿದೆ.

Congress: ಕುರುಡುಮಲೆ ದೇವಸ್ಥಾನದಿಂದ "ಪ್ರಜಾಧ್ವನಿ-2'ಕ್ಕೆ ನಾಳೆ ಚಾಲನೆ

ಅಂದು ಬೆಳಗ್ಗೆ 10.30ಕ್ಕೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿರುವ ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಚುನಾವಣ ಪ್ರಚಾರಕ್ಕೆ ಕೆಪಿಸಿಸಿ ಅಧಿಕೃತ ಚಾಲನೆ ನೀಡಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಈ ಮೊದಲು ಮಾ.29ರಂದು ಮುಳಬಾಗಿಲಿನ ಕುರುಡುಮಲೆ ಹಾಗೂ ಮಾ.30ರಂದು ಹಾಸನದ ಹೊಳೆನರಸೀಪುರದಿಂದ “ಪ್ರಜಾಧ್ವನಿ-2’ಕ್ಕೆ ಚಾಲನೆ ನೀಡಲು ಕಾಂಗ್ರೆಸ್‌ ಉದ್ದೇಶಿಸಿತ್ತು. ಈ ಸಂಬಂಧ ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿದ್ದವು. ಆದರೆ ಕೋಲಾರದಲ್ಲಿ ಪಕ್ಷದ ನಾಯಕರ ಭಿನ್ನಮತ ಸ್ಫೋಟಗೊಂಡು, ಅದು ರಾಜೀನಾಮೆ ಪ್ರಹಸನಕ್ಕೂ ತಲುಪಿದ್ದ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು.


Spread the love

About Laxminews 24x7

Check Also

ಬಿಹಾರ ಫಲಿತಾಂಶ ಬಳಿಕ ಸಂಪುಟ ಪುನಾರಚನೆ?

Spread the love ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪುಟ ಪುನಾರಚನೆಯ ಸುಳಿವು ನೀಡಿದ್ದಾರೆ. ಈ ನಿಟ್ಟಿ‌ನಲ್ಲಿ ಚರ್ಚೆ ನಡೆಸಲು ನ.15ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ