Breaking News

ಬಸನಗೌಡ ಪಾಟೀಲ ಯತ್ನಾಳ್‌ ಹುಚ್ಚು ಶಾಸಕ: ಸಚಿವ ದಿನೇಶ್‌ ಗುಂಡೂರಾವ್‌ ಕಿಡಿ

Spread the love

ಬೆಂಗಳೂರು: ‘ಭಾರತೀಯ ಭ್ರಷ್ಟರ ಪಾರ್ಟಿಯಲ್ಲಿ ಯತ್ನಾಳ್‌ ಎಂಬ ಹುಚ್ಚು ಶಾಸಕ ಬಾಯಿಗೆ ಬಂದಂತೆ ಮಾತನಾಡುತ್ತಲೇ ಇರುತ್ತಾರೆ. ಯತ್ನಾಳ್‌ರಂತೆ ನಾವು ಮನೆ ಒಡೆಯುವ ಕೆಲಸ, ಕೀಳು ಭಾಷೆ ಬಳಕೆ ಮಾಡುವುದಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸಚಿವ ದಿನೇಶ್‌ ಗುಂಡೂರಾವ್‌ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರ ಹೇಳಿಕೆಗೆ ‘X’ (ಟ್ವೀಟ್‌) ಮೂಲಕ ಪ್ರತಿಕ್ರಿಯಿಸಿರುವ ದಿನೇಶ್‌, ‘ಮತಾಂಧತೆಯಲ್ಲಿ ಬಿದ್ದು ಹೊರಳಾಡುತ್ತಿರುವ ಯತ್ನಾಳ್‌ ಮಾತೆತ್ತಿದರೆ ಪಾಕಿಸ್ತಾನ, ಪಾಕಿಸ್ತಾನ ಎನ್ನುತ್ತಾರೆ. ಅವರಿಗೆ ಪಾಕಿಸ್ತಾನದ ಮೇಲೆ ಅಷ್ಟೊಂದು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ’ ಎಂದಿದ್ದಾರೆ.

 

‘ಬಿಜೆಪಿ ಭೀಷ್ಮ ಅಡ್ವಾಣಿಯವರ ಮೂಲವೇ ಪಾಕಿಸ್ತಾನ. ಆಮಂತ್ರಣವೇ ಇಲ್ಲದೇ ಪಕ್ಕದ ಮನೆಗೆ ಹೋಗುವಂತೆ ವೈರಿ ದೇಶಕ್ಕೆ ಹೋಗಿ ಬಂದವರು ಮೋದಿ. ತಲೆಯಲ್ಲಿ ಮೆದುಳೇ ಇಲ್ಲದಂತೆ ಮಾತನಾಡುವ, ಅರೆ ಹುಚ್ಚನಂತಾಗಿರುವ ಯತ್ನಾಳ್‌ರಿಂದ ಪಾಠ ಕಲಿಯುವ ಕರ್ಮ ನನಗಿನ್ನೂ ಬಂದಿಲ್ಲ’ ಎಂದು ಕಿಡಿಕಾರಿದ್ದಾರೆ.ದೂರು: ‘ ದಿನೇಶ್‌ ಗುಂಡೂರಾವ್ ಮತ್ತು ಅವರ ಕುಟುಂಬದವರನ್ನು ದೇಶದ್ರೋಹಿಗಳು ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಯತ್ನಾಳ್‌ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಶೇಷಾದ್ರಿಪುರ ಪೊಲೀಸ್‌ ಠಾಣಾಧಿಕಾರಿಗೆ ಮತ್ತು ಮುಖ್ಯ ಚುನಾವಣಾ ಆಯುಕ್ತರಿಗೆ ಗಾಂಧಿನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಜೆ. ಸರವಣನ್‌ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ