Breaking News

ಬತ್ತಿದ ಜೀವನದಿ; ಹೆಚ್ಚಿದ ದುಗುಡ

Spread the love

ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತ ಕಂಡಿದೆ. ಇದರಿಂದ ಮನುಷ್ಯರು ಮಾತ್ರವಲ್ಲ; ಜಲಚರಗಳಿಗೂ ಆತಂಕ ಎದುರಾಗಿದೆ. ಚಿಕ್ಕೋಡಿ ಉಪವಿಭಾಗದ ಎಲ್ಲ ಪ್ರದೇಶಗಳಲ್ಲೂ ಕುಡಿಯುವ ನೀರಿಗೆ, ಬಳಕೆಗೆ, ಹೊಲ- ಗದ್ದೆಗಳಿಗೆ, ಜಾನುವಾರುಗಳಿಗೂ ಸಂಕಷ್ಟ ಎದುರಾಗಿದೆ.

ಚಿಕ್ಕೋಡಿ | ಬತ್ತಿದ ಜೀವನದಿ; ಹೆಚ್ಚಿದ ದುಗುಡ

ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ ತಾಲ್ಲೂಕು ವ್ಯಾಪ್ತಿಯ ನೂರಾರು ಗ್ರಾಮಗಳು ಕೃಷ್ಣಾ ನದಿಯನ್ನು ಅವಲಂಬಿಸಿವೆ. ಉಪ ವಿಭಾಗ ವ್ಯಾಪ್ತಿಯಲ್ಲಿ 10 ಸಣ್ಣ ಪುಟ್ಟ ಬ್ಯಾರೇಜ್‌ಗಳಿದ್ದು, ಇನ್ನು 10 ದಿನಗಳಲ್ಲಿ ಬ್ಯಾರೇಜ್‌ನಲ್ಲಿ ಸಂಗ್ರಹವಾಗಿರುವ ನೀರು ಖಾಲಿಯಾಗುವ ಸಾಧ್ಯತೆ ಇದೆ.

ಕಲ್ಲೋಳ- ಯಡೂರ, ಬಾ. ಸವದತ್ತಿ- ಮಾಂಜರಿ, ಉಗಾರ- ಕುಡಚಿ, ದರೂರ- ಹಲ್ಯಾಳ, ಇಂಗಳಿ- ದಿಗ್ಗೇವಾಡಿ, ಹಿಪ್ಪರಗಿ ಜಲಾಶಯ ಸೇರಿದಂತೆ 8ಕ್ಕೂ ಹೆಚ್ಚು ಬ್ಯಾರೇಜ್‌ಗಳಿವೆ. 6 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಹಿಪ್ಪರಗಿ ಬ್ಯಾರೇಜಿನಲ್ಲಿ ಇದೀಗ 0.833 ಟಿಎಂಸಿ ಅಡಿ ಮಾತ್ರ ನೀರು ಸಂಗ್ರಹವಿದೆ. ಇನ್ನುಳಿದ ಬ್ಯಾರೇಜ್‌ಗಳು ಅತೀ ಕಡಿಮೆ ನೀರು ಸಂಗ್ರಹ ಸಾಮರ್ಥ್ಯ ಹೊಂದಿವೆ.


Spread the love

About Laxminews 24x7

Check Also

8 ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ, ಸರ್ಕಾರಕ್ಕೆ ಸಂಜೆ 7 ಗಂಟೆಯ ಡೆಡ್‌ಲೈನ್‌

Spread the loveಬೆಳಗಾವಿ, ನವೆಂಬರ್ 6: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ (Farmers Protest), ಹೋರಾಟದ ಕಾವು ದಿನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ