ಬೆಂಗಳೂರು: ನನ್ನಂಥವನನ್ನು ಹುಡುಕಿ ಸೀಟ್ ಕೊಟ್ಟಿದ್ದು ಬಿಜಿಪಿ ಪಕ್ಷದ ದೊಡ್ಡ ಗುಣ ಎಂದು ಕರ್ನಾಟಕದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಡಾ.ಕೆ.ನಾರಾಯಣ್ ಹೇಳಿದ್ದಾರೆ.
ಬಿಜೆಪಿ ಹೈಕಮಾಂಡ್ ರಾಜ್ಯದ ಕಮಲ ನಾಯಕರಿಗೆ ಮತ್ತೆ ಶಾಕ್ ನೀಡಿದ್ದು, ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಪಕ್ಷಕ್ಕೆ ಸಂಬಂಧಿಸಿದ ಕರಪತ್ರಗಳನ್ನು ಮುದ್ರಿಸುತ್ತಿದ್ದ ಕೆ ನಾರಾಯಣ್ ಅವರನ್ನು ಆಯ್ಕೆ ಮಾಡಿದೆ. ಈ ವಿಚಾರವಾಗಿ ಮಾತನಾಡಿರುವ ಅವರು, ದೆಹಲಿಯವರು ಯಾವುದೋ ಮೂಲೇಲಿರೋರನ್ನೂ ಗುರುತಿಸಿದ್ದು ಖುಷಿ ವಿಚಾರ ಎಂದಿದ್ದಾರೆ.