Breaking News
Home / ರಾಜಕೀಯ / ಇದು ಬಡವರು – ಶತಕೋಟಿ ಒಡೆಯರ ನಡುವಿನ ಚುನಾವಣೆ: ರಾಹುಲ್ ಗಾಂಧಿ

ಇದು ಬಡವರು – ಶತಕೋಟಿ ಒಡೆಯರ ನಡುವಿನ ಚುನಾವಣೆ: ರಾಹುಲ್ ಗಾಂಧಿ

Spread the love

ಇದು ಬಡವರು – ಶತಕೋಟಿ ಒಡೆಯರ ನಡುವಿನ ಚುನಾವಣೆ: ರಾಹುಲ್ ಗಾಂಧಿ

ಜೈಪುರ: ‘ದೇಶದ ರೈತರು ತಮ್ಮ ಬೆಳಗೆ ಕನಿಷ್ಠ ಬೆಂಬಲ ಬೆಲೆ ಕೇಳುತ್ತಿದ್ದಾರೆ, ಯುವಕರು ಉದ್ಯೋಗ ಹುಡುಕುತ್ತಿದ್ದಾರೆ, ಮಹಿಳೆಯರು ಹಣದುಬ್ಬರದಿಂದ ಬೇಸತ್ತಿದ್ದಾರೆ. ಆದರೆ ಇವರ ಕೂಗನ್ನು ಯಾರು ಕೇಳಿಸಿಕೊಳ್ಳುತ್ತಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು.

 

ರಾಜಸ್ಥಾನದ ಬಿಕಾನೇರ್ ಲೋಕಸಭಾ ಕ್ಷೇತ್ರದ ಅನುಪ್‌ಗಢದಲ್ಲಿ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, ‘ನಿರುದ್ಯೋಗ, ಹಣದುಬ್ಬರ ಈ ದೇಶದ ಅತಿದೊಡ್ಡ ಸಮಸ್ಯೆಗಳೆಂದು ದೇಶದ ಯಾರನ್ನೇ ಕೇಳಿದರೂ ಹೇಳುತ್ತಾರೆ’ ಎಂದರು.

‘ದೇಶದ ನೈಜ ಸಮಸ್ಯೆಗಳನ್ನು ಬಿಟ್ಟು ಮಾಧ್ಯಮಗಳು ಅಂಬಾನಿ ಮಗನ ಮದುವೆ ಕಾರ್ಯಕ್ರಮ ಪ್ರಸಾರ ಮಾಡುವುದರಲ್ಲಿಯೇ ನಿರತವಾಗಿವೆ. ನಿರುದ್ಯೋಗ, ಹಣದುಬ್ಬರ ಮಾಧ್ಯಮಗಳಿಗೆ ಸಮಸ್ಯೆಯಾಗಿಯೇ ಕಾಣಿಸುತ್ತಿಲ್ಲ. ದಿನದ ಇಪ್ಪತ್ತನಾಲ್ಕು ಗಂಟೆ ಪ್ರಧಾನಿ ನರೇಂದ್ರ ಮೋದಿ ಅವರ ಮುಖ ತೋರಿಸುವುದೇ ಅವುಗಳ ಕೆಲಸವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ