Breaking News
Home / ರಾಜಕೀಯ / ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ತಲುಪದ ಕಾರಣ ಸೋತೆ: ಎಂಟಿಬಿ ನಾಗರಾಜ್

ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ತಲುಪದ ಕಾರಣ ಸೋತೆ: ಎಂಟಿಬಿ ನಾಗರಾಜ್

Spread the love

ಹೊಸಕೋಟೆ: ‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಹಲವು ಕಾರಣಗಳಿರಬಹುದು. ಆದರೆ, ಮತದಾರರಿಗೆ ಹಂಚಲು ಕೊಟ್ಟಿದ್ದ ಹಣ ಸರಿಯಾಗಿ ಹಂಚಿಕೆಯಾಗಲಿಲ್ಲ. ಹಾಗಾಗಿ ನಾನು ಸೋಲಬೇಕಾಯಿತು’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.

 

ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮತದಾರರಿಗೆ ಹಂಚಿಕೆಯಾಗಬೇಕಿದ್ದ ಹಣ ಅವರನ್ನು ತಲುಪಿಲ್ಲ ಎಂಬ ಕುರಿತು ನನಗೆ ಹಲವು ದೂರು ಬಂದಿದ್ದವು.ಈ ಲೋಕಸಭಾ ಚುನಾವಣೆಯಲ್ಲಿ ಹಾಗೇ ಆಗುವುದು ಬೇಡ’ ಎಂದರು.

 

‘ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಹಲವು ಮುಖಂಡರ ಸ್ವಯಂಕೃತ ಅಪರಾಧವೂ ನನ್ನ ಸೋಲಿಗೆ ಕಾರಣ. ಸಮಯದ ಕೊರತೆಯಿಂದ ಪ್ರಚಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ