Breaking News

ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ

Spread the love

ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ

 

ಳ್ಳಾರಿ: ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಇನ್ನೂ ಸಮಯವಿದೆ. ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಬಿ.ವೈ.ವಿಜಯೇಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

 

ಯಡಿಯೂರಪ್ಪ ಆದೇಶದಂತೆ ಬಳ್ಳಾರಿಗೆ ಬಂದಿದ್ದೇನೆ. ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ಬಿಜೆಪಿಯ ಗೆಲುವು ಖಚಿತ. ಶ್ರೀರಾಮುಲು ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಬಳ್ಳಾರಿಗೆ ಯಡಿಯೂರಪ್ಪ ಸೇರಿದಂತೆ ಇತರ ನಾಯಕರು ಪ್ರಚಾರಕ್ಕೆ ಆಗಮಿಸಲಿದ್ದಾರೆ. ರಾಜ್ಯದ 30 ಜನ ಸಚಿವರನ್ನು ಕರೆ ತಂದರೂ ಬಳ್ಳಾರಿಯಲ್ಲಿ ಬಿಜೆಪಿ ಗೆಲುವು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ