Breaking News
Home / Uncategorized / ಸಗಣಿ ರಾಶಿ ಹಾಕಿ ಅದರಲ್ಲಿ ಗ್ರಾಮಸ್ಥರು ಹೊರಳಾಡಿ, ಹೊಡೆದಾಡುವುದೇ ಹಬ್ಬ

ಸಗಣಿ ರಾಶಿ ಹಾಕಿ ಅದರಲ್ಲಿ ಗ್ರಾಮಸ್ಥರು ಹೊರಳಾಡಿ, ಹೊಡೆದಾಡುವುದೇ ಹಬ್ಬ

Spread the love

ಚಾಮರಾಜನಗರ: ಜಿಲ್ಲೆಯ ಗಡಿಯಂಚಿನಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯಿತು. ಸಗಣಿ ರಾಶಿ ಹಾಕಿ ಅದರಲ್ಲಿ ಗ್ರಾಮಸ್ಥರು ಹೊರಳಾಡಿ, ಹೊಡೆದಾಡುವುದೇ ಹಬ್ಬದ ವಿಶೇಷ.

ಕೋವಿಡ್ ಗೆ ಡೋಂಟ್ ಕೇರ್ ಎಂದು ಗ್ರಾಮಸ್ಥರು ಗುಂಪು ಸೇರಿ ಕಣಿದು ಕುಪ್ಪಳಿಸಿದರು. ಬಲಿಪಾಢ್ಯಮಿಯ ಮಾರನೇ ದಿನ ಈ ಗೊರೆ ಹಬ್ಬವನ್ನು ಆಚರಿಸಲಾಗತ್ತದೆ. ಅಚ್ಚ ಕನ್ನಡಿಗರೆ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಪ್ರತಿವರ್ಷ ಗೊರೆ ಹಬ್ಬ ಆಚರಿಸಲಾಗುತ್ತದೆ. ಅದರಂತೆ ಈ ವರ್ಷವೂ ಸಹ ಸಂಪ್ರದಾಯದಂತೆ ಗೊರೆ ಹಬ್ಬ ಆಚರಿಸಲಾಯಿತು.

ಸಗಣಿಯಲ್ಲೇ ಹಿರಳಾಡಿ, ಹೊಡೆದಾಡುವುದು ಈ ಹಬ್ಬದ ವಿಶೇಷ. ಹಬ್ಬದ ದಿನ ಬೆಳಗ್ಗೆ ಗ್ರಾಮದ ಎಲ್ಲರ ಮನೆಯ ಕೊಟ್ಟಿಗೆಗಳಿಂದ ಸಗಣಿಯನ್ನು ಎತ್ತಿನ ಗಾಡಿ ಹಾಗೂ ಟ್ರ್ಯಾಕ್ಟರ್ ಗಳ ಮೂಲಕ ತಂದು ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ರಾಶಿ ಹಾಕಲಾಗುತ್ತದೆ. ಇದಾದ ನಂತರ ಗ್ರಾಮದ ಹೊಳೆ ದಂಡೆಗೆ ಹೋಗಿ ಇಬ್ಬರು ವ್ಯಕ್ತಿಗಳಿಗೆ ಹುಲ್ಲಿನ ಮೀಸೆ ಗಡ್ಡವನ್ನು ಕಟ್ಟಿ ಹಣೆಗೆ ನಾಮ ಬಳಿದು ಅವರನ್ನು ಕತ್ತೆಯ ಮೇಲೆ ಕೂರಿಸಿ ಊರ ತುಂಬೆಲ್ಲಾ ಮೆರವಣಿಗೆ ಮಾಡಲಾಗುತ್ತದೆ. ಹೀಗೆ ಕತ್ತೆಯ ಮೇಲೆ ಕೂರಿಸಿ ಮೆರವಣಿಗೆ ಮಾಡುವವರನ್ನು ಕೊಂಡಕಾರರು ಎನ್ನಲಾಗುತ್ತದೆ.


Spread the love

About Laxminews 24x7

Check Also

ರಾಜ್ಯದ ಈ ಊರಲ್ಲಿ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ?

Spread the loveರಾಜ್ಯದ ಈ ಊರಲ್ಲಿ ಒಂದೇ ಕುಟುಂಬದ 85 ಮಂದಿ ಏಕಕಾಲದಲ್ಲಿ ಮತದಾನ ! ಎಲ್ಲಿ ಗೊತ್ತಾ? ಚಿಕ್ಕಬಳ್ಳಾಪುರು: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ