Breaking News

ವರ್ಷ ಧಾರೆಗೆ ನೆಲಕ್ಕುರುಳಿದ ಮರ

Spread the love

ಬೈಲಹೊಂಗಲ: ಪಟ್ಟಣ ಸೇರಿದಂತೆ ತಾಲ್ಲೂಕಿನ ಸುತ್ತಮುತ್ತಲಿನ‌ ಕೆಲ‌ ಗ್ರಾಮಗಳಲ್ಲಿ ಗುಡುಗು, ಜೋರಾದ ಗಾಳಿಯೊಂದಿಗೆ ಗುರುವಾರ ಮಳೆ ಸುರಿಯಿತು.

ಕಾಯ್ದ ಭೂ ತಾಯಿ ಒಡಲಿಗೆ ಏಕಾಏಕಿ ಧರೆಗಿಳಿದ ಮಳೆರಾಯ ತುಸು ತಂಪೆರೆದ. ಬಿಸಿಲಿನ ಝಳಕ್ಕೆ ಕಂಗೆಟ್ಟಿದ್ದ ಜನತೆ ಮಳೆಯ ಹನಿ ನೀರು ನೆತ್ತಿಯ ಮೇಲೆ ಬಿಳುತ್ತಿದ್ದಂತೆ ವರ್ಷಧಾರೆಗೆ ಮೈಯೊಡ್ಡಿ ಸಂಭ್ರಮಿಸಿದರು.

ಪಟ್ಟಣ ಪ್ರದೇಶದಲ್ಲಿ ತುಂತುರು ಮಳೆ ಹನಿ ಸುರಿದರೆ ಮತಕ್ಷೇತ್ರದ ಇಂಚಲ, ಹಾರೂಗೊಪ್ಪ, ಮರಕುಂಬಿ, ಮುರಗೋಡ, ಸುತ್ತಗಟ್ಟಿ ಗ್ರಾಮದಲ್ಲಿ ಜೋರಾದ ಮಳೆ ಸುರಿಯಿತು. ಮಳೆಯ ರಭಸಕ್ಕೆ ಬೀದಿಗಳು ಮಳೆ ನೀರಿನಿಂದ ತುಂಬಿ ಹರಿದವು. ಚರಂಡಿಗಳು ಉಕ್ಕಿ ತ್ಯಾಜ್ಯ ನೀರು ಹರಿದು ಹಳ್ಳ ಸೇರಿತು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ