ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು,
ಸಾವಿರಾರು ಸಂಖ್ಯೆಯ ಬೆಂಬಲಿಗರು, ಮುಖಂಡರು, ಪಕ್ಷದ ಕಾರ್ಯಕರ್ತರೊಂದಿಗೆ ಏ. 15 ರಂದ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ಆಲಗೂರ ತಿಳಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು