ದಾವಣಗೆರೆ: ರಾಜಕೀಯ, ಚುನಾವಣೆ ದೃಷ್ಟಿಯಿಂದ ಮರಾಠ ಅಭಿವೃದ್ದಿ ನಿಗಮ ಸ್ಥಾಪಿಸಿಲ್ಲ. ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ನಿಗಮ ಸ್ಥಾಪಿಸಲಾಗಿದೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮರಾಠ ಭಾಷೆಗೆ ಆದ್ಯತೆ ಕೊಟ್ಟಿಲ್ಲ. ಸಮಾಜದವರ ಏಳಿಗೆಗೆ, ಅಭಿವೃದ್ದಿಗೆ ನಿಗಮ ಮಾಡಿದೆ. ನನ್ನ ಕ್ಷೇತ್ರದಲ್ಲಿ ಸಹ ಸಾಕಷ್ಟು ಜನ ಮರಾಠರು ಇದ್ದಾರೆ. ಬಂಜಾರ ನಿಗಮ, ಅಂಬೇಡ್ಕರ್ ಇದೆ. ಅದರಂತೆ ಮರಾಠ ನಿಗಮ ಸ್ಥಾಪಿಸಲಾಗಿದೆ. ಇದಕ್ಕೆ ಭೆರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Laxmi News 24×7