Breaking News

ಸಿಡಿಲು ಬಡಿದು 18 ಕುರಿ ಸಾವು

Spread the love

ಕುಂಸಿ: ಸಿಡಿಲು ಬಡಿದು 18 ಕುರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸಮೀಪದ ಆಯನೂರು ಕೋಟೆಯಲ್ಲಿ ಶುಕ್ರವಾರ ನಡೆದಿದೆ.

ಸಂಜೆ ಸಾಧಾರಣ ಮಳೆಯಾಗುತ್ತಿತ್ತು. ನಂತರ ಬಡಿದ ಸಿಡಿಲಿಗೆ 18 ಕುರಿಗಳು ಬಲಿಯಾಗಿವೆ.

ಮಾಲೀಕ ಝಾಕಿರ್ ಹುಸೇನ್ ಅವರು ಕುರಿಗಳನ್ನು ಮೇಯಿಸಲು ಮಕ್ಕಳೊಂದಿಗೆ ಆಯನೂರು ಕೋಟೆ ಪಕ್ಕದ ಬಯಲಿಗೆ ಹೊಡೆದುಕೊಂಡು ಹೋಗಿದ್ದರು‌.ಸಾಧಾರಣ ಮಳೆಯ ನಂತರ ಆಕಸ್ಮಿಕವಾಗಿ ಬಡಿದ ಸಿಡಿಲಿಗೆ ಹದಿನೆಂಟು ಕುರಿಗಳು ಬಲಿಯಾಗಿವೆ.

ಝಾಕಿರ್ ಅವರ ಕುಟುಂಬ ಕುರಿ ಮಾರಾಟದಿಂದಲೇ ಜೀವನ ನಡೆಸುತ್ತಿತ್ತು. ಪಶುಸಂಗೋಪನಾ ಆಸ್ಪತ್ರೆಯ ವೈದ್ಯಾಧಿಕಾರಿ ಮತ್ತು ಗ್ರಾಮದ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದರು.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ