Breaking News

ಸಿಡಿಲು ಬಡಿದು ಎತ್ತು, ಕುರಿಗಳ ಸಾವು

Spread the love

ವಿಜಯಪುರ: ಶನಿವಾರ ಸಂಜೆ ಬಿರುಗಾಳಿ ಸಹಿತ ಅಬ್ಬರಿಸಿದ ಮಳೆಯ ಸಿಡಿಲಿಗೆ ವಿಜಯಪುರ ಜಿಲ್ಲೆಯಲ್ಲಿ ಎತ್ತು, ಕುರಿಗಳು ಬಲಿಯಾಗಿ, ರೈತರಿಗೆ ಅಪಾರ ಹಾನಿಯಾಗಿದೆ.

ಶನಿವಾರ ರಾತ್ರಿ ಸುರಿದ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಲಾಳಸಂಗಿ ಗ್ರಾಮದ ಖಾಸೀಮ ಅಲ್ಲಾಭಕ್ಷ ಭಾಗವಾನ ಎಂಬವರಿಗೆ ಸೇರಿದ ಎತ್ತು ಮೃತಪಟ್ಟಿದೆ.

Vijayapura: ಸಿಡಿಲು ಬಡಿದು ಎತ್ತು, ಕುರಿಗಳ ಸಾವು

ಮತ್ತೊಂದೆಡೆ ಸಾರವಾಡ ಗ್ರಾಮದ ಸುನಂದಾ ಮಲ್ಲಿಕಾರ್ಜುನ ಗಂಗನಹಳ್ಳಿ ಎಂಬರ ಜಮೀನಿನಲ್ಲಿ ಬೀಡುಬಿಟ್ಡಿದ್ದ ಕುರಿ ಹಿಂಡಿನ‌ ಮೇಲೆ ಸಿಡಿಲು ಬಡಿದು 10 ಕುರಿಗಳು ಸಾವಿಗೀಡಾಗಿವೆ.

ಇಟ್ಟಂಗಿಹಾಳ ಮೂಲದ ವಿಲಾಸ ರಘು ದೊಂಬಾಳೆ ಎಂಬವರಿಗೆ ಸೇರಿದ ಕುರಿಗಳಾಗಿದ್ದು, ಕುರಿಗಳ ಸಾವಿನಿಂದ ಲಕ್ಷಾಂತರ ರೂ. ನಷ್ವವಾಗಿದೆ.

ಸಿಡಿಲು ಬಡಿದು ಕುರಿ, ಮೇಕೆ, ಎತ್ತು, ಎಮ್ಮೆಗಳು ಮೃತಪಟ್ಟ ಸಂದರ್ಭದಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ತ್ವರಿತವಾಗಿ ಸ್ಪಂದಿಸಬೇಕು. ಬಾಧಿತ ರೈತರಿಗೆ ತುರ್ತಾಗಿ ಪ್ರಕೃತಿ ವಿಕೋಪ ಪರಿಹಾರ ನಿಧಿ ಯೋಜನೆಯಲ್ಲಿ ಪರಿಹಾರ ವಿತರಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the loveಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ