Breaking News

ಜನಸೇವೆಗೆ ಅರ್ಹರಲ್ಲ: ಡಾ.ಕೆ.ಸುಧಾಕರ್‌ ವಿರುದ್ಧ ಸಿಡಿದ ತಿಗಳ ಸಮುದಾಯ

Spread the love

ದೇವನಹಳ್ಳಿ: ಸಮುದಾಯ ವಿರೋಧಿ ಮನಸ್ಥಿತಿಯ ಡಾ.ಕೆ.ಸುಧಾಕರ್‌ ಅಂಥವರು ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗಗಳ ಅವನತಿಗೆ ಕಾರಣವಾಗುತ್ತದೆ ಎಂದು ಹೊಸಕೋಟೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಯರಾಜ್‌ ಸ್ವಪಕ್ಷೀಯ ಅಭ್ಯರ್ಥಿ ವಿರುದ್ಧವೇ ಬಹಿರಂಗವಾಗಿ ಹರಿಹಾಯ್ದರು.

ತಿಗಳ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗದಂತೆ ಸುಧಾಕರ್‌ ಷ್ಯಡಂತ್ರ ರೂಪಿಸಿದ್ದರು.

ಅವರದು ಕಿರುಕುಳ ನೀಡುವ ಮನಸ್ಥಿತಿ. ಅವರ ಧೋರಣೆಯಿಂದ ನಿಷ್ಠಾವಂತ ಕಾರ್ಯಕರ್ತರ ರಾಜಕೀಯ ಜೀವನ ಕೊನೆಗೊಳ್ಳುತ್ತದೆ ಎಂದು ದೂರಿದರು.

ಕರ್ನಾಟಕ ರಾಜ್ಯ ತಿಗಳರ ವಹ್ನಿಕುಲ ಕ್ಷತ್ರಿಯ ಸಂಘ ಭಾನುವಾರ ಪಟ್ಟಣದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಮುದಾಯ ಮುಖಂಡರ ಸಭೆಯಲ್ಲಿ ಅವರು
ಮಾತನಾಡಿದರು.

ಜನಸೇವೆಗೆ ಅರ್ಹರಲ್ಲ: ಡಾ.ಕೆ.ಸುಧಾಕರ್‌ ವಿರುದ್ಧ ಸಿಡಿದ ತಿಗಳ ಸಮುದಾಯ

‘ಸಣ್ಣ ಸಮುದಾಯಗಳ ಮೇಲಿನ ಅಗೌರವ, ನಾಯಕರ ಬೆಳವಣಿಗೆ ಸಹಿಸದ ಮನಸ್ಥಿತಿಯ ಸುಧಾಕರ್‌ ಅವರನ್ನು ರಾಜಕೀಯ ಶಕ್ತಿಯಿಂದ ದೂರವಿಡಬೇಕು. ಕೇವಲ ಶಾಸಕರು, ಸಂಸದರನ್ನು ಗೆಲ್ಲಿಸಲು ಮಾತ್ರ ನಾವಿಲ್ಲ. ಸಮುದಾಯದ ಏಳಿಗೆಗೆ ನಮ್ಮವರನ್ನೇ ನಾಯಕರನ್ನಾಗಿಸಲು ಸಿದ್ಧರಿದ್ದೇವೆ ಎಂದು ಮನದಟ್ಟು ಮಾಡಿಕೊಡಬೇಕು’ ಎಂದು ಹೇಳಿದರು.

‘ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಹೂಡಿ ವಿಜಯ್‌ಕುಮಾರ್‌ ರಾಜಕೀಯ ಜೀವನ ಹಾಳು ಮಾಡಿ, ಹೊಂದಾಣಿಕೆ ರಾಜಕೀಯದಲ್ಲಿ ಸಮುದಾಯದ ನಂಬಿಕೆಯನ್ನು ಮಣ್ಣು ಪಾಲು ಮಾಡಿದ ಸುಧಾಕರ್‌ ರಾಜಕೀಯಕ್ಕೆ ಅರ್ಹರಲ್ಲ’ ಎಂದು ತಿಗಳರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ ಟೀಕಿಸಿದರು.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ