ನಿಪ್ಪಾಣಿ: ಏ.18 ಹಾಗೂ 19ರಂದು ಜರುಗಲಿರುವ ಸಿಇಟಿ ಪರೀಕ್ಷೆಗಳಿಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗಾಗಿ ಸ್ಥಳೀಯ ವಿಎಸ್ಎಂ ಸೋಮಶೇಖರ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯ(ವಿಎಸ್ಎಂಎಸ್ಆರ್ಕೆಐಟಿ)ದಿಂದ ಬಸ್ಗಳ ಸೌಲಭ್ಯ ಕಲ್ಪಿಸಲಾಗುವುದು ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.
ಉಮೇಶ ಪಾಟೀಲ ತಿಳಿಸಿದ್ದಾರೆ.
ತಾಂತ್ರಿಕ ಮಹಾವಿದ್ಯಾಲಯ (ಪರೀಕ್ಞಾ ಕೇಂದ್ರ ಸಂಖ್ಯೆ – 315)ದಲ್ಲಿ ವಿದ್ಯಾರ್ಥಿಗಳ ಹಾಗೂ ಪಾಲಕರ ಅನುಕೂಲಕ್ಕಾಗಿ ಬಸ್ಗಳನ್ನು ಉಚಿತವಾಗಿ ಬಿಡಲಾಗುವುದು. ಪರೀಕ್ಷೆಗಳು ನಡೆಯಲಿರುವ ಎರಡೂ ದಿನ ಬೆಳಿಗ್ಗೆ 8.30 ರಿಂದ 9.30ರ ವರೆಗೆ ಸ್ಥಳೀಯ ಬಸ್ ನಿಲ್ದಾಣದಿಂದ ಒಟ್ಟು 6 ಬಸ್ಗಳನ್ನು ಬಿಡಲು ನಿಯೋಜಿಸಲಾಗಿದೆ. ಅಲ್ಲದೆ ಪರೀಕ್ಷೆಗಳು ಮುಗಿಯುವವರೆಗೆ ಪಾಲಕರಿಗೆ ವಿಎಸ್ಎಂ ಕನ್ವೆನ್ಶನ್ ಹಾಲ್ನಲ್ಲಿ ವಿಶ್ರಾಂತಿ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷೆಗಳು ಮುಗಿದ ನಂತರ ಮತ್ತೆ ಮಹಾವಿದ್ಯಾಲಯದಿಂದ ಬಸ್ ನಿಲ್ದಾಣವರೆಗೆ ಬಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.