ಮಂಡ್ಯ, ಏಪ್ರಿಲ್, 18: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣಗಳು ದಿನದಿಂದ ದಿನಕ್ಕೆ ಸುಡು ಬಿಸಲಿಲಿನಂತೆ ರಂಗೆರುತ್ತಿವೆ. ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಮಾಡಲು ಸಿನಿಮಾ ಸ್ಟಾರ್ಗಳು ಅಭ್ಯರ್ಥಿಗಳ ಪ್ರಚಾರ ಮಾಡುತ್ತಿದ್ದಾರೆ. ಹಾಗೆಯೇ ಇದೀಗ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಮಂಡ್ಯ ಕಾಂಗ್ರೆಸ್ ಅಭ್ಯರ್ಥಿಳ ಪ್ರಚಾರ ಮಾಡಲಿದ್ದಾರೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದ್ದು, ಈ ವಿಚಾರ ಇದೀಗ ಭಾರೀ ಸಂಚಲನ ಮೂಡಿಸಿದೆ.
ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿ ಗೆಲುವು ಸಾಧಿಸಿ ಸಂಸದರಾಗಿದ್ದರು. ಇನ್ನು ಲೋಕಸಭೆ ಚುನಾವಣೆ ಹಿನ್ನೆಲೆ ಈ ಕ್ಷೇತ್ರದಿಂದ ಸುಮಲತಾ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗುತ್ತದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದರೆ ಟಿಕೆಟ್ ಕೈತಪ್ಪಿದ್ದು, ಕೊನೆಗೂ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡಲಾಯಿತು.
ಈ ಎಲ್ಲಾ ಮುನಿಸು ಮರೆತು ಕೊನೆಗೂ ಸಂಸದೆ ಸುಮಲತಾ ಅವರು ಬಿಜೆಪಿಗೆ ಸೇರ್ಪಡೆಯಾದರು. ಇನ್ನು ಬಿಜೆಪಿ ಸೇರ್ಪಡೆಯಾಗಿರುವ ಸಂಸದೆ ಸುಮಲತಾರನ್ನು ಅಮ್ಮಾ ಅಂತಲೇ ಕರೆಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಇಂದು (ಏಪ್ರಿಲ್ 18) ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಮುಂದಾಗಿದ್ದು, ಈ ವಿಚಾರ ಕುತೂಹಲ ಕೆರಳಿಸಿದೆ.
ಮತ್ತೊಂದೆಡೆ ನೋಡುವುದಾದರೆ, ಮೈತ್ರಿ ಅಭ್ಯರ್ಥಿ ಜೆಡಿಎಸ್ ಪಕ್ಷದ ಎಚ್.ಡಿ.ಕುಮಾರಸ್ವಾಮಿಯವರ ಪರ ಸುಮಲತಾ ಇನ್ನೂ ಪ್ರಚಾರಕ್ಕಿಳಿದಿಲ್ಲ. ಬಿಜೆಪಿಯ ರಾಜ್ಯ, ಕೇಂದ್ರ ನಾಯಕರು ಹೇಳಿದರೆ ಮಾತ್ರ ಕುಮಾರಸ್ವಾಮಿಯವೆ ಪರ ಪ್ರಚಾರ ಮಾಡುವುದಾಗಿ ಹೇಳಿದ್ದರು. ಆದರೆ ಈವರೆಗೂ ಪ್ರಚಾರಕ್ಕಿಳಿಯದೇ ಮೌನದಲ್ಲಿದ್ದಾರೆ. ಇದವರ ನಡುವೆ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರಕ್ಕಿಳಿಯಲು ನಿರ್ಧರಿಸಿದ್ದಾರೆ ಎನ್ನುವ ಸುದ್ದಿಗಳು ಕೂಡ ಇದೀಗ ಎಲ್ಲೆಡೆ ಹರಿದಾಡುತ್ತಿದ್ದು, ಈ ವಿಚಾರ ಕುತೂಹಲ ಮೂಡಿಸಿದೆ.