Breaking News
Home / ರಾಜಕೀಯ / ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್

Spread the love

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ ಬಾರಿ ನಾವೂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಬೆಂಬಲಿಸುತ್ತೇವೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ.

ಒಕ್ಕಲಿಗರು ಎಂಬ ಕಾರಣಕ್ಕೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ. ಲಕ್ಷ್ಮಣ್ ಅವರು ಒಕ್ಕಲಿಗರಲ್ಲ ಎಂದು ಕೆಲವರು ಆರೋಪ ಮಾಡಿದರು. ಲಕ್ಷ್ಮಣ್ ಅವರು ಒಕ್ಕಲಿಗರೇ. ಅವರು ಒಕ್ಕಲಿಗರ ಸಂಘದಿಂದ ಸ್ಪರ್ಧೆ ಮಾಡಿದ್ದಾರೆ. ಒಕ್ಕಲಿಗರನ್ನು ತುಳಿಯುವ ಕೆಲಸ ಮಾಡಲಾಗುತ್ತಿದೆ. ಹೀಗಾಗಿಯೇ ನಾವೂ ಲಕ್ಷ್ಮಣ್ ಅವರಿಗೆ ಬೆಂಬಲ‌ ನೀಡುತ್ತಿದ್ದೇವೆ. ಲಕ್ಷ್ಮಣ್ ಕಾಂಗ್ರೆಸ್ ಅಭ್ಯರ್ಥಿ ಎಂದು ಬೆಂಬಲಿಸುತ್ತಿಲ್ಲ. ಪ್ರತ್ಯೇಕ ಅಗಿ ಬೆಂಬಲ ನೀಡಿದ್ದೇವೆ ಎಂದಿದ್ದಾರೆ.

ಮೈಸೂರಿನಲ್ಲಿ ಇತ್ತಿಚೆಗೆ ನಡೆದ ಪ್ರಚಾರ ಕಾರ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಕ್ಕಲಿಗ ಎಂಬ ಕಾರ್ಡ್ ಪ್ರದರ್ಶಿಸಿದರು. ಲಕ್ಷ್ಮಣ್ ಅವರನ್ನು ಒಕ್ಕಲಿಗ ಎಂಬುದನ್ನು ಬಿಂಬಿಸಿದರು. ಪ್ರಚಾರದ ನಡುವೆ ಅದನ್ನೇ ಒತ್ತಿ ಒತ್ತಿ ಹೇಳಿದರು. ಆದರೆ ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಲಕ್ಷ್ಮಣ್ ಒಕ್ಕಲಿಗನಲ್ಲ ಎಂಬುದನ್ನು ಸಾಬೀತು ಮಾಡಲು ಪ್ರಯತ್ನಿಸಿದರು. ಇದೀಗ ಸಿದ್ದರಾಮಯ್ಯ ಚಲಾಯಿಸಿದ ಕಾರ್ಡ್ ಸಕ್ಸಸ್ ಆಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷರೇ ಲಕ್ಷ್ಮಣ್ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಒಕ್ಕಲಿಗರ ಮತವೆಲ್ಲ ಲಕ್ಷ್ಮಣ್ ಅವರ ಕಡೆಗೆ ವಾಲುವ ಎಲ್ಲಾ ಸಾಧ್ಯತೆ ಇದೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ