Breaking News

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Spread the love

ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ.

ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಬಿದ್ದಿದೆ.

 

ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ. ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯ ರಸ್ತೆಗೆ ಬರುತಿದ್ದರು.

 

ಬೈಕ್ ನಲ್ಲಿದ್ದ ಸಹಸವಾರ ತೀವ್ರ ರೀತಿಯಲ್ಲಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ