Breaking News

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

Spread the love

ವದೆಹಲಿ: ತಿಹಾರ್‌ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಇನ್ಸುಲಿನ್‌ ಪಡೆಯಲು ಮತ್ತು ವೈದ್ಯರ ಸಹಾಯ ಪಡೆಯಲು ನಿರಾಕರಿಸುವ ಮೂಲಕ ಅವರನ್ನು ನಿಧಾನವಾಗಿ ಸಾವಿನೆಡೆಗೆ ತಳ್ಳಲಾಗುತ್ತಿದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ವಕ್ತಾರ ಸೌರಭ್‌ ಭಾರದ್ವಾಜ್‌, ‘ಕೇಜ್ರಿವಾಲ್‌ ಅವರು ಡಯಾಬಿಟಿಸ್‌ (ಮಧುಮೇಹ) ಹೊಂದಿದ್ದಾರೆ.

ಆದ್ದರಿಂದ ಇನ್ಸುಲಿನ್‌ ಪಡೆಯಲು ಮತ್ತು ಅವರ ಕುಟುಂಬ ವೈದ್ಯರನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂಪರ್ಕಿಸಲು ಅನುಮತಿ ಕೋರಿದ್ದಾರೆ. ಆದರೆ, ಅವರ ಮನವಿಯನ್ನು ಜೈಲಿನ ಅಧಿಕಾರಿಗಳು ನಿರಾಕರಿಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ವೈದ್ಯರ ಸಹಾಯ ಪಡೆಯಲು ನಿರಾಕರಣೆ: ಕೇಜ್ರಿವಾಲ್‌ ಸಾವಿಗೆ ಪಿತೂರಿ; ಎಎಪಿ ಆರೋಪ

‘ಮುಖ್ಯಮಂತ್ರಿ ಕೇಜ್ರಿವಾಲ್‌ ಅವರು ಕಳೆದ 20-22 ವರ್ಷಗಳಿಂದ ಡಯಾಬಿಟಿಸ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರು ಇನ್ಸುಲಿನ್‌ ಪಡೆಯಲು ನಿರಾಕರಿಸುವ ಮೂಲಕ ಅವರ ಸಾವಿಗೆ ಪಿತೂರಿ ನಡೆಯುತ್ತಿದೆ’ ಎಂದು ಭಾರದ್ವಾಜ್‌ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿದಾಗಿನಿಂದ ಅವರ ಸಕ್ಕರೆ ಮಟ್ಟವನ್ನು (ಶುಗರ್‌ ಲೆವಲ್‌) ನಿಯಂತ್ರಿಸಲು ಇನ್ಸುಲಿನ್‌ ಅನ್ನು ನೀಡಲಾಗಿಲ್ಲ. ಇದು ಆತಂಕಕಾರಿಯಾಗಿದೆ ಎಂದು ಕೇಜ್ರಿವಾಲ್‌ ಪರ ವಕೀಲ ಅಭಿಷೇಕ್ ಸಿಂಘ್ವಿ ಹೇಳಿದ್ದಾರೆ.


Spread the love

About Laxminews 24x7

Check Also

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ