Breaking News

ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

Spread the love

ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ಭಾನುವಾರ ಸಂಜೆ ಬಂದ ಇಂಡಿಗೋ ವಿಮಾನ ಸಿಬ್ಬಂದಿ ಸುಮಾರು 22 ಹೆಚ್ಚು ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದಿದ್ದು ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ವಿಮಾನದಲ್ಲಿ ಆಗಮಿಸಿದ್ದು, ಅವರ ಬ್ಯಾಗ್ ಕೂಡ ವಿಮಾನದಲ್ಲಿ ಇರಲಿಲ್ಲ ಎನ್ನಲಾಗಿದೆ.

ಬೆಳಗಾವಿಗೆ ಬಂದು ಇಳಿಯುವವರೆಗೆ ಬ್ಯಾಗ್ ತಂದಿಲ್ಲ ಎಂಬುದರ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ.
ಭಾನುವಾರ ಸಂಜೆ 5.55ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನದಲ್ಲಿ ಮಲೇಷಿಯನ್ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ವಿಮಾನ ರಾತ್ರಿ 7.30 ಗಂಟೆಗೆ ಬೆಳಗಾವಿಗೆ ಬಂದಿಳಿಯುತ್ತಿದ್ದಂತೆ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿತ್ತು.ನಂತರ ಪರಿಶೀಲನೆ ನಡೆಸಿದಾಗ ಸುಮಾರು 22 ಕ್ಕೂ ಹೆಚ್ಚು ಪ್ರಯಾಣಿಕರ ಬ್ಯಾಗ್ ಗಳು ಬಂದಿರಲಿಲ್ಲ.

ಈ ಕುರಿತು ಇಂಡಿಗೋ ವಿಮಾನ ಸಿಬ್ಬಂದಿಯನ್ನು ಪ್ರಯಾಣಿಕರು ವಿಚಾರಿಸಿದಾಗ ಮಲೇಷಿಯನ್ ವಿದ್ಯಾರ್ಥಿಗಳ ಬ್ಯಾಗ್ ಗಳು ಬಹಳ ದೊಡ್ಡದಿದ್ದವು. ಹಾಗಾಗಿ ಬೇರೆ ಪ್ರಯಾಣಿಕರ ಬ್ಯಾಗ್ ಗಳನ್ನು ತರಲು ಸಾಧ್ಯವಾಗಿಲ್ಲ. ನಿಮ್ಮ ಬ್ಯಾಗ್ ಗಳನ್ನು ನಾಳೆ ತರಿಸಿಕೊಡುತ್ತೇವೆ ಎಂದು ಉಡಾಫೆ ಉತ್ತರ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ವಿಮಾನ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಪ್ರತಿಭಟನೆ ನಡೆಸಿದ್ದಾರೆ.

ಮಲೇಷಿಯನ್ ವಿದ್ಯಾರ್ಥಿಗಳ ಬ್ಯಾಗ್ ದೊಡ್ಡದಿದ್ದರೆ ಅವರ ಬ್ಯಾಗ್ ಬಿಡಬಹುದಿತ್ತು. ಅಥವಾ ನಮಗೆ ಮೊದಲೇ ಮಾಹಿತಿ ನೀಡಬೇಕಿತ್ತು. ನಮ್ಮಲ್ಲಿ ಬೇರೆ ಊರಿನ ಪ್ರಯಾಣಿಕರಿದ್ದಾರೆ. ಹಲವರ ಔಷಧಿಗಳು ಸೇರಿದಂತೆ ಅಗತ್ಯ ವಸ್ತುಗಳು ಬ್ಯಾಗ್ ನಲ್ಲಿವೆ. ಅಂತವರು ಈಗ ಏನು ಮಾಡಬೇಕು ಎಂದು ಪ್ರಯಾಣಿಕರು ಪ್ರಶ್ನಿಸಿದರು.

ತೂಕ ಸೇರಿದಂತೆ ಎಲ್ಲ ಪರಿಶೀಲನೆಯ ನಂತರವೇ ಲಗೇಜ್ ಪಡೆದು, ವಿಮಾನಕ್ಕೆ ಹಾಕಲಾಗುತ್ತದೆ. ಆದರೂ ಈ ರೀತಿಯ ಅಚಾತುರ್ಯ ಹೇಗಾಯಿತು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಪ್ರಯಾಣಿಕರು ವಿಮಾನ ಸಿಬ್ಬಂದಿಗಳ ಬೇಜವಾಬ್ದಾರಿಗೆ ಹಿಡಿಶಾಪ ಹಾಕಿದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ