Breaking News

ಒಂದೇ ಕುಟುಂಬದ 6 ಮಂದಿ ಸಾವು

Spread the love

ದಾಂಡೇಲಿ (ಉತ್ತರ ಕನ್ನಡ ಜಿಲ್ಲೆ): ಕಾಳಿ ನದಿ ಹಿನ್ನೀರು ಪ್ರದೇಶವಾದ ಬೀರಂಪಾಲಿಯ ಅಕ್ವಾಡ ಗ್ರಾಮದ ಹತ್ತಿರ ನಾಲ್ವರು ಮಕ್ಕಳು ಸೇರಿದಂತೆ, ಒಂದೇ ಕುಟುಂಬದ ಆರು ಜನ ಪ್ರವಾಸಿ ಗರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಭಾನುವಾರ ಸಂಜೆ ಮೃತಪಟ್ಟಿದ್ದಾರೆ.

ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ ಹೊಂಬಳ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್‌ (6), ಬೆಂಗಳೂರಿನ ನಿವಾಸಿಗಳಾದ ರೇಷಾ ಉನ್ನಿಸಾ ತೋಸಿಫ್ ಅಹ್ಮದ್ (38), ಇಫ್ರಾ‌ ತೋಸಿಫ್ ಅಹ್ಮದ್ (15), ಅಬೀದ್ ಅಹ್ಮದ್ (12) ಮೃತರು.ಪ್ರವಾಸಕ್ಕೆ ಬಂದಿದ್ದ ಎಂಟು ಮಂದಿಯಲ್ಲಿ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

 

‘ಹುಬ್ಬಳ್ಳಿಯಿಂದ ದಾಂಡೇಲಿಯ ಪ್ರವಾಸಕ್ಕೆ ಕುಟುಂಬ ಸಮೇತರಾಗಿ ಎಂಟು ಜನರು ಬಂದಿದ್ದು ನದಿ ನೀರಿನಲ್ಲಿ ಆಟ ಆಡುತ್ತಿದ್ದಾಗ ಆಳ ನೀರಿಗೆ ಕಾಲು ಜಾರಿದ ಮಕ್ಕಳನ್ನು ರಕ್ಷಿಸಲು ಮುಂದಾದರು. ಒಬ್ಬರ ನಂತರ ಒಬ್ಬರು ಮುಳುಗಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ