ಚಿಕ್ಕಬಳ್ಳಾಪುರ, ಏಪ್ರಿಲ್. 22: ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಾರು ನಿರೀಕ್ಷಿಸದ ಫಲಿತಾಂಶ ನೀಡಿ ರಾಜ್ಯದ ಜನಕ್ಕೆ ಅಚ್ಚರಿ ನೀಡಿದ್ದ ಕ್ಷೇತ್ರ ಚಿಕ್ಕಬಳ್ಳಾಪುರ. ಕಾಂಗ್ರೆಸ್ನ ಭದ್ರಕೋಟೆಯಾಗಿದ್ದ ಚಿಕ್ಕಬಳ್ಳಾಪುರವನ್ನು 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಮತ್ತು ಒಕ್ಕಲಿಗರ ಮತಗಳಿಂದ ಬಿಜೆಪಿ ಮೊದಲ ಬಾರಿಗೆ ಕಸಿದುಕೊಂಡಿತ್ತು.

ಕಳೆದ ಬಾರಿಯ ವಿಧಾನಸಭಾ ಚುನಾವಣೆಲ್ಲಿ ಸೋಲು ಕಂಡ ಮಾಜಿ ಸಚಿವ ಡಾ.ಕೆ.ಸುಧಾಕರ್ಗೆ ಈ ಸಲಿ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಕಣಕ್ಕೆ ಇಳಿದಿದ್ದಾರೆ. ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್ ಯುವ ನಾಯಕ ರಕ್ಷಾ ರಾಮಯ್ಯ ಅವರನ್ನು ಕಣಕ್ಕಿಳಿಸಿದೆ. ಸದ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ವರ್ಚಸ್ಸು ಹೆಚ್ಚುತ್ತಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ. ಕ್ಷೇತ್ರ ಉಳಿಸಿಕೊಳ್ಳಲು ಸುಧಾಕರ್ ಪರದಾಡುತ್ತಿದ್ದಾರೆ.
Laxmi News 24×7