Breaking News
Home / ರಾಜಕೀಯ / ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ!

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ!

Spread the love

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ!

ವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ ದಂಡ!

ದೆಹಲಿ ಸಿಎಂ ಅವರ ಅಧಿಕಾರಾವಧಿ ಮುಗಿಯುವವರೆಗೆ ಅಥವಾ ಅವರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಯುವವರೆಗೆ ಅವರಿಗೆ ಜಾಮೀನು ಒದಗಿಸಬೇಕೆಂದು ಅರ್ಜಿಯಲ್ಲಿ ವಿನಂತಿಸಲಾಗಿತ್ತು.

ಈ ಅರ್ಜಿಯನ್ನು ತಿರಸ್ಕರಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಮತ್ತು ನ್ಯಾಯಮೂರ್ತಿ ಮನಮೀತ್‌ ಪ್ರೀತಂ ಸಿಂಗ್‌ ಅರೋರಾ ಅವರ ವಿಭಾಗೀಯ ಪೀಠ, ಅರ್ಜಿಯನ್ನು ಯಾವುದೇ ಆಧಾರವಿಲ್ಲದೆ ಸಲ್ಲಿಸಲಾಗಿದೆ. ಪಿಐಎಲ್‌ ಸಲ್ಲಿಸಲು ಕೇಜ್ರಿವಾಲ್‌ ಅಧಿಕಾರ ನೀಡಿದ ಪವರ್‌ ಆಫ್‌ ಅಟಾರ್ನಿಯನ್ನು ಅರ್ಜಿದಾರರು ಹೊಂದಿಲ್ಲ ಎಂದು ಹೇಳಿದ ನ್ಯಾಯಾಲಯ ಅರ್ಜಿದಾರನಿಗೆ ರೂ 75,000 ವೆಚ್ಚಗಳನ್ನು ಪಾವತಿಸುವಂತೆ ಆದೇಶಿಸಿದೆ.

ಈ ಪಿಐಎಲ್‌ ಅನ್ನು “ವಿ, ದಿ ಪೀಪಲ್‌ ಆಫ್‌ ಇಂಡಿಯಾ” ಎಂಬ ಹೆಸರಿನಲ್ಲಿ ಸಲ್ಲಿಸಲಾಗಿತ್ತಲ್ಲದೆ. ತಮಗೆ ಯಾವುದೇ ಪ್ರಚಾರ ಬೇಡ ಎಂದು ಹೇಳಿ ಹೆಸರು ಬಳಸಿಲ್ಲ, ತಾವು ದೆಹಲಿ ಜನರನ್ನು ಪ್ರತಿನಿಧಿಸುತ್ತಿರುವುದಾಗಿ ಅರ್ಜಿದಾರ ಹೇಳಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ