Breaking News

ಉಗರಖೋಡ ಪಂಚಾಯ್ತಿಯಲ್ಲಿ ಅಧ್ಯಕ್ಷ- ಸದಸ್ಯನ ಹೊಡೆದಾಟ!

Spread the love

ನ್ನಮ್ಮನ ಕಿತ್ತೂರು: ಗ್ರಾಮ ಪಂಚಾಯ್ತಿ ವಾರ್ಡಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸದಸ್ಯನೊಬ್ಬ ಕೊರೆಸಿದ ಕೊಳವೆ ಬಾವಿ ಬಿಲ್ ಮಂಜೂರು ಮಾಡುವಂತೆ ನಡೆದ ಮಾತಿನ ನಡುವೆ ನಡೆದ ಚಕಮಕಿಯು ಪಂಚಾಯ್ತಿ ಅಧ್ಯಕ್ಷ ಮತ್ತು ಸದಸ್ಯನ ನಡುವೆ ಹೊಡೆದಾಟದೊಂದಿಗೆ ಮುಕ್ತಾಯ ಕಂಡಿದೆ.

ಉಗರಖೋಡ ಪಂಚಾಯ್ತಿಯಲ್ಲಿ ಅಧ್ಯಕ್ಷ- ಸದಸ್ಯನ ಹೊಡೆದಾಟ!

ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವಾರ್ಡಿನಲ್ಲಿ ಸದಸ್ಯ ನಿಂಗರಾಜ ಅಂಬಡಗಟ್ಟಿ ಎಂಬುವರು ಕೊಳವೆ ಬಾವಿ ಕೊರೆಸಿದ್ದರು. ಅದರ ಬಿಲ್ ಮಂಜೂರು ಮಾಡುವಂತೆ ಒತ್ತಾಯಿಸುತ್ತಿದ್ದರು. ಪಿಡಿಪ ಎಲ್ಲರ ಸದಸ್ಯರ ಸಭೆ ಕರೆದಾಗ ಅಧ್ಯಕ್ಷ ಶಫಿಕ್ ಹವಾಲ್ದಾರ್ ಹಾಗೂ ಈ ಸದಸ್ಯನ ಮಧ್ಯೆ ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ಹೋಗಿ ಇಬ್ಬರೂ ಕೈ ಮಿಲಾಯಿಸಿದ್ದಾರೆ. ಇಬ್ಬರ ನಡುವೆ ನಡೆದ ಹೊಡೆದಾಟವನ್ನು ಕೆಲವರು ಮೂಕ ಪ್ರೇಕ್ಷಕರಾಗಿ ವೀಕ್ಷಿಸುತ್ತ ನಿಂತರು. ಮತ್ತೆ ಕೆಲವರು ಬಿಡಿಸಲು ಹೋದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಈ ಹೊಡೆದಾಟದ ದೃಶ್ಯಗಳು ಪಂಚಾಯ್ತಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹಲವರ ಮೊಬೈಲ್‌ ಫೋನ್‌ಗಳಲ್ಲಿ ಹರಿದಾಡುತ್ತಿವೆ.

‘ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಪಿಡಿಒ ಸಭೆ ಹೇಗೆ ಕರೆದರು ಎಂಬುದು ಇಲ್ಲಿ ಪ್ರಶ್ನೆಯಾಗಿದೆ’ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ನೀಟ್ ರದ್ಧತಿಗೆ ಮನನೊಂದು ಸರಣಿ ಆತ್ಮಹತ್ಯೆ – ನಾಲ್ವರು ಆಕಾಂಕ್ಷಿಗಳು ಸೂಸೈಡ್

Spread the loveನವದೆಹಲಿ: ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದುಗೊಂಡ ಹಿನ್ನೆಲೆ ಆಘಾತಕ್ಕೊಳಗಾಗಿ ನಾಲ್ವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ