Breaking News

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love

ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು ಪಾಲಾಗಲಿದ್ದಾರೆ. ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನು ಆದೇಶವನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್‌, ಒಂದು ವಾರದೊಳಗೆ ಶರಣಾಗುವಂತೆ ಶರಣರಿಗೆ ಸೂಚಿಸಿದೆ.

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಕಳೆದ ವರ್ಷ ನ. 8ರಂದು ಕರ್ನಾಟಕ ಹೈಕೋರ್ಟ್‌ ಶರಣರಿಗೆ ಜಾಮೀನು ನೀಡಿತ್ತು. ಈಗ ಈ ಆದೇಶವನ್ನು 4 ತಿಂಗಳ ಕಾಲ ಅಮಾನತಿನಲ್ಲಿಟ್ಟಿರುವ ಸುಪ್ರೀಂ ಕೋರ್ಟ್‌, 4 ತಿಂಗಳೊಳಗೆ ಪ್ರಮುಖ ಸಾಕ್ಷ್ಯಗಳ ವಿಚಾರಣೆ ನಡೆಸಬೇಕು ಎಂದು ವಿಚಾರಣ ನ್ಯಾಯಾಲಯಕ್ಕೆ ಸೂಚಿಸಿದೆ. ಒಂದು ವೇಳೆ 4 ತಿಂಗಳಿನಲ್ಲಿ ವಿಚಾರಣೆ ಪೂರ್ಣಗೊಳ್ಳದಿದ್ದರೆ ಹೆಚ್ಚುವರಿಯಾಗಿ 2 ತಿಂಗಳು ಹೆಚ್ಚಳಕ್ಕಾಗಿ ಅರ್ಜಿ ಸಲ್ಲಿಸಬಹುದು. ಒಟ್ಟಿನಲ್ಲಿ ಪ್ರತಿ ನಿತ್ಯ ವಿಚಾ ರಣೆ ನಡೆಸಿಯಾದರೂ ಸರಿ, ಒಂದು ವರ್ಷದೊ ಳಗಾಗಿ ವಿಚಾರಣೆ ಪೂರ್ಣಗೊಳಿಸಬೇಕು ಎಂದೂ ಸೂಚಿಸಿದೆ. ಸಂತ್ರಸ್ತೆಯರ ತಂದೆಯ ಪರ ವಕೀಲೆ ಅಪರ್ಣಾ ಭಟ್‌, ಈ ಪ್ರಕರಣದಲ್ಲಿ ಸಂತ್ರಸ್ತೆಯರಿಬ್ಬರು ಅಪ್ರಾಪ್ತರಾಗಿದ್ದಾರೆ. ಹೀಗಾಗಿ ಪೋಕ್ಸೋ ಅಡಿ ಪ್ರಕರಣ ದಾಖಲಿಸಲಾಗಿದೆ.

ಜಾಮೀನು ನೀಡಿರುವುದು ಸರಿಯಲ್ಲ. ಕರ್ನಾಟಕ ಹೈಕೋರ್ಟ್‌ ಆದೇಶವನ್ನು ರದ್ದು ಮಾಡಬೇಕು ಎಂದು ಕೋರಿದರು.

ಬಾಲಕಿಯರನ್ನು ಕ್ರಮವಾಗಿ 3.5 ವರ್ಷ ಮತ್ತು 1.5 ವರ್ಷ ಲೈಂಗಿಕವಾಗಿ ಹಿಂಸಿಸಲಾಗಿದೆ. ಈ ವಿಷಯವನ್ನು ಬಾಯಿ ಬಿಡದಂತೆ ಬೆದರಿಕೆ ಹಾಕಲಾಗಿದೆ. ಇಬ್ಬರು ಬಾಲಕಿಯರು ಮ್ಯಾಜಿಸ್ಟ್ರೇಟ್‌ ಅವರ ಮುಂದೆ ನೀಡಿದ ಹೇಳಿಕೆಯಲ್ಲಿ ತಮ್ಮನ್ನು ತೀವ್ರವಾಗಿ ಥಳಿಸಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ