Breaking News

ಬಿಸಿಲ ತಾಪಕ್ಕೆ ಇಬ್ಬರು ಮಕ್ಕಳ ಸಾವು

Spread the love

ರಾಯಚೂರು, ಏ.28- ಬಿಸಿಲ ತಾಪಕ್ಕೆ ಬಸವಳಿದು ನಿತ್ರಾಣಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚಿಕ್ಕಸುಗೂರು ಗ್ರಾಮದಲ್ಲಿ ನಡೆದಿದೆ.ರಣಬಿಸಿಲಿನ ತಾಪದಿಂದ ಹೈರಾಣಾಗಿರುವ ಜನರು ಮನೆಯಿಂದ ಹೊರಬರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಚಿಕ್ಕಸುಗೂರು ಗ್ರಾಮದಲ್ಲಿ ಹುಸೇನಮ್ಮ-ಮಾರುತಿ ದಂಪತಿಯ ಮಕ್ಕಳಾದ ಆರತಿ (9) ಮತ್ತು ಪ್ರಿಯಾಂಕಾ (7) ನಿತ್ರಾಣಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮತ್ತೊಬ್ಬ ಪುತ್ರ ಲಕ್ಕಪ್ಪ (5)ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರಲ್ಲಿ ಬಿಸಿಲ ತಾಪಕ್ಕೆ ಇಬ್ಬರು ಮಕ್ಕಳ ಸಾವು

ಈ ನಡುವೆ ಕೆಲವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಬಿಸಿಲ ಬೇಗೆ ಹಿನ್ನೆಲೆಯಲ್ಲಿ ಕೃಷ್ಣಾನದಿಯ ನೀರು ಕುಡಿಯುತ್ತಿದ್ದ ಈ ಕುಟುಂಬದವರು ಅನಾರೋಗ್ಯಕ್ಕೀಡಾಗಿದ್ದರು ಎಂದು ಅಧಿ ಕಾರಿಗಳು ತಿಳಿಸಿದ್ದಾರೆ. ಆದರೆ, ಬೇಸಿಗೆಯ ಬೇಗೆಗೆ ಇಬ್ಬರು ಮಕ್ಕಳು ಮೃತಪಟ್ಟಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ