ಹಾಸನ : ಲೈಂಗಿಕ ದೌರ್ಜನ್ಯ ಆರೋಪ(Sexual harassment case) ವಿಚಾರದಲ್ಲಿ ಟ್ವಿಸ್ಟ್ ಸಿಕ್ಕಿದ್ದು ಸಂತ್ರಸ್ತೆ(Victim) ದೂರಿನ ವಿರುದ್ದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಸುದ್ದಿಘೋಷ್ಟಿ ನಡೆಸಿದ ಸಂತ್ರಸ್ತೆಯ ಗಂಡನ ತಾಯಿ ಮತ್ತು ಕುಟುಂಬಸ್ಥರು, ಸಂತ್ರಸ್ತೆ ಹಾಗೂ ದೂರುದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ದೇವೇಗೌಡರು ಕುಟುಂಬದವರು ನಮಗೆ ಎಂದೂ ಮೋಸ ಮಾಡಿಲ್ಲ, ನಮಗೆ ಒಳ್ಳೆಯದನ್ನೇ ಮಾಡಿದ್ದಾರೆ, ಭವಾನಿ ಅಮ್ಮ ನಮಗೆ ತುಂಬಾ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.
ದೂರು ನೀಡಿದ ಮಹಿಳೆ ಮೈ ತುಂಬಾ ಸಾಲ ಮಾಡಿಕೊಂಡಿದ್ದರು , ಯಾವುದೋ ಒತ್ತಡದಿಂದ ಈ ರೀತಿ ಮಾಡಿದ್ದಾರೆ. ಲೈಂಗಿಕ ದೌರ್ಜ್ಯನ್ಯ ನಡೆದಿದ್ದರೆ 5 ವರ್ಷದ ಹಿಂದೆಯೇ ಹೇಳಬೇಕಿತ್ತು . ಈಗ ಚುನಾವಣೆ ಸಮಯದಲ್ಲಿ ಗೌಡರ ಮನೆ ಹೆಸರಿಗೆ ಕಪ್ಪು ಚುಕ್ಕೆ ತರಲು ಈ ರೀತಿ ಮಾಡುತ್ತಿದ್ದಾರೆ. ಆಕೆಯ ನಡತೆಯೂ ಸರಿಯಲ್ಲ. ಆಕೆ ಹಣದ ಬೇಡಿಕೆ ಇಟ್ಟಿದ್ದಾಳೆ, ಕೊಡದಿದ್ದಾಗ ಈ ರೀತಿ ಮಾಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ನಮಗೆ ರೇವಣ್ಣ ಕುಟುಂಬ ದೇವರಿದ್ದಂತೆ, ಆ ವಿಡಿಯೋಗೂ ನಮಗೂ ಸಂಬಂಧವಿಲ್ಲ ಇದು ದುರುದ್ದೇಶದಿಂದ ಕೂಡಿದೆ ಟೆಕ್ನಾಲಜಿ ಬಳಸಿ ಏನೇನೋ ಮಾಡಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ.