Breaking News

ಬಸ್ ನಂಬಿ ರೋಡಿಗಿಳಿಯೋ ಮುನ್ನ ಎಚ್ಚರವಾಗಿರಿ.

Spread the love

ಬೆಂಗಳೂರು: ಬಸ್ ನಂಬಿ ರೋಡಿಗಿಳಿಯೋ ಮುನ್ನ ಎಚ್ಚರವಾಗಿರಿ. ಯಾಕಂದ್ರೆ ಸಾರಿಗೆ ನೌಕರರು ಇಂದು ಮತ್ತೆ ಬೀದಿಗಿಳಿಯುತ್ತಿದ್ದಾರೆ. ಸರ್ಕಾರಿ ನೌಕರರನ್ನಾಗಿ ಘೋಷಿಸುವಂತೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಬೃಹತ್ ಪತ್ರ ಚಳುವಳಿ ನಡೆಯಲಿದೆ. ನಾಲ್ಕು ನಿಗಮಗಳ 1 ಸಾವಿರಕ್ಕೂ ಹೆಚ್ಚು ಸಾರಿಗೆ ನೌಕರರಿಂದ ಇಂದು ಮಧ್ಯಾಹ್ನ 1 ಗಂಟೆಗೆ ಫ್ರೀಡಂಪಾರ್ಕ್ ನಲ್ಲಿ ಸೇರಲಿದ್ದಾರೆ.

ಕಳೆದ 8 ತಿಂಗಳ ಹಿಂದೆಯೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸುವಂತೆ ಕೂಗು ಎದ್ದಿತ್ತು. ಈ ಕೂಗಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭರವಸೆ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನ ಕೈ ಬಿಟ್ಟಿದ್ದ ಸಾರಿಗೆ ನೌಕರರು, ಸಚಿವರ ಭರವಸೆ ಈಡೇರದ ಹಿನ್ನೆಲೆಯಲ್ಲಿ ಇಂದು ಪತ್ರ ಚಳುವಳಿಯ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದಾರೆ.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ