ಭಾರತದಲ್ಲಿ ಸದ್ಯ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕಲರವ ಹೆಚ್ಚಾಗಿದ್ದು, ಮುಂದಿನ ತಿಂಗಳು ಅಂದರೆ ಮೇ 26 ರಂದು ಮುಕ್ತಾಯವಾಗಲಿದೆ. ಇದಾದ ನಂತರ ಎಲ್ಲರ ಚಿತ್ತ 2024ರ ಟಿ20 ವಿಶ್ವಕಪ್ ಅತ್ತ ಎನ್ನುವಂತೆ ಆಗಿದೆ. ಅಷ್ಟರ ಮಟ್ಟಿಗೆ ಬಹುನಿರೀಕ್ಷಿತ ಈ ಟೂರ್ನಿ ಕ್ರಿಕೆಟ್ ಪ್ರೇಮಿಗಳನ್ನು ಆರ್ಕಷಿಸಿದೆ.
ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ನೆಲದಲ್ಲಿ ಜೂನ್ 1 ರಿಂದ 29 ರವರೆಗೆ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಗೆ ತಂಡವನ್ನು ಪ್ರಕಟಿಸಲು ಮೇ 1 ಕೊನೆಯ ದಿನ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಸೂಚನೆ ನೀಡಿತ್ತು. ಅದರಂತೆ ಎಲ್ಲರ ಕುತೂಹಲ ಹೆಚ್ಚಿಸಿದ ಭಾರತ ತಂಡದ ಆಟಗಾರರ ಆಯ್ಕೆ ಪ್ರಕ್ರಿಯೆ ಮುಕ್ತಾಯವಾಗಿದೆ.
ಆದರೆ ಟೀಮ್ ಇಂಡಿಯಾದಲ್ಲಿ ಕೆಲ ಆಟಗಾರರ ಆಯ್ಕೆ ಆಚ್ಚರಿ ತಂದರೆ, ಇನ್ನುಳಿದ ಸ್ಟಾರ್ ಆಟಗಾರ ಹೆಸರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೈ ಬಿಟ್ಟಿರುವುದು ಅಘಾತಕಾರಿಯಾಗಿದೆ. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಮತ್ತು ವಿಕೆಟ್ ಕೀಪರ್ ಕೆಎಲ್ ರಾಹುಲ್ ಅವರನ್ನು 2024ರ ಟಿ20 ವಿಶ್ವಕಪ್ ತಂಡದಿಂದ ಬಿಸಿಸಿಐ ಕೈ ಬಿಟ್ಟಿದೆ. ಯಾವ ಕಾರಣಕ್ಕೆ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಿಲ್ಲ ಎಂಬ ಕಾರಣವನ್ನು ಬಿಸಿಸಿಐ ಇನ್ನು ತಿಳಿಸಿಲ್ಲ.
ಕೆ ಎಲ್ ರಾಹುಲ್ ಟಿ 20 ವಿಶ್ವಕಪ್ ತಂಡದಿಂದ ಸ್ಥಾನ ಮಿಸ್ ಆಗಿದ್ದಕ್ಕೆ ಕಾರಣಗಳನ್ನು ಹುಡುಕುತ್ತಾ ಹೊರಾಟಗ ನೂರಾರು ಕಾರಣಗಳು ಕಣ್ಣು ಮುಂದೆ ಹಾದು ಹೋಗುತ್ತವೆ. ಸದ್ಯ ಕನ್ನಡಿಗ ರಾಹುಲ್ ಅವರ ಫಾರ್ಮ್ ಗಮನಿಸಿದ ಬಿಸಿಸಿಐ ಆಯ್ಕೆ ಸಮಿತಿ ಅವರನ್ನು ತಂಡದಿಂದ ಕೈ ಬಿಟ್ಟಿರುವುದು ಸುಳ್ಳು ಅಲ್ಲವೇ ಅಲ್ಲ.