ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಭವನಿ ರೇವಣ್ಣಗೆ ಸ್ಥಳೀಯ ಪೊಲೀಸರ ಮೂಲಕ ಎಸ್ಐಟಿ ನೋಟಿಸ್ ನೀಡಿದೆ.
ಇಂದು ಅಥವಾ ನಾಳೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಇಂದು ಸ್ಥಳೀಯರ ಪೊಲೀಸರು ಹಳೆನರಸೀಪುರದಲ್ಲಿರುವ ಎಚ್.ಡಿ. ರೇವಣ್ಣ ಮನೆಗೆ ನೋಟಿಸ್ ನೀಡಿ ಹೋಗಿರುವ ಬಗ್ಗೆ ಮಾಹಿತಿ ಸಿಗುತ್ತಿದ್ದು, ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಎಸ್ಐಟಿ ವಿಚಾರಣೆ ಎರಡು ಬಾರಿ ನೋಟಿಸ್ ನೀಡಿದೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಅವರಿಗೂ ಕೂಡ ಎಸ್ಐಟಿ ನೋಟಿಸ್ ನೀಡಿದೆ. ಆದರೂ ಕೂಡ ಅವರಿಬ್ಬರೂ ಇದುವರೆಗೂ ಎಸ್ಐಟಿ ವಿಚಾರಣೆಗೆ ಹಾಜರಾಗಿಲ್ಲ.