ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣ (Pendrive case) ಹಿನ್ನೆಲೆಯಲ್ಲಿ ತೀವ್ರ ಅಘಾತಕ್ಕೆ ಒಳಗಾಗಿರುವ ದೇವೇಗೌಡರ (HD Devegowda) ನಿವಾಸಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಭೇಟಿ ನೀಡಿ ತಾತ ಅವರ ಆರೋಗ್ಯ ವಿಚಾರಿಸಿದ್ದಾರೆ.
ಆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ನನಗೆ ನಾಲ್ಕು ದಿನಗಳಿಂದ ವೈರಲ್ ಫಿವರ್ (Viral Fever) ಆಗಿತ್ತು. ಹಾಗಾಗಿ ಫೋನ್ನಲ್ಲಿ ಮಾತನಾಡಿದ್ದೆ, ಈಗ ಬಂದು ಅವರ ಆರೋಗ್ಯ (Health) ವಿಚಾರಿಸಿದ್ದೇನೆ ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಪ್ರಕರಣ ವಿಚಾರವಾಗಿ ಕರ್ನಾಟಕ ಸರ್ಕಾರ ಈಗಾಗಲೇ ಎಸ್ ಐಟಿ ರಚನೆ ಮಾಡಿದೆ. ತನಿಖೆ ನಡೆಯುತ್ತಿದೆ ಇದೆ ಕಾನೂನಿಗಿಂತ ಯಾರು ದೊಡ್ಡವರಲ್ಲ, ಅದು ಒಂದು ಪ್ರಕ್ರಿಯೆ ಅದರ ಬಗ್ಗೆ ನಾನು ಮಾತನಾಡೋಕ್ಕೆ ಹೋಗಲ್ಲ ಎಂದರು.
ಕೈ ಮುಗಿದು ಕೇಳಿಕೊಳ್ಳುತ್ತೇನೆ
ಡಿಕೆ ಬ್ರದರ್ಸ್, ಎಚ್ಡಿಡಿ ಕುಟುಂಬವನ್ನು ಟಾರ್ಗೆಟ್ ಮಾಡ್ತಿದ್ದಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ನಿಖಿಲ್, ಈ ಒಂದು ಪ್ರಕರಣ ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಡ್ತಾ ಇದೆ. ವಿಶೇಷವಾಗಿ ಅಜ್ಜಿ ಚೆನ್ನಮ್ಮ ಯಾವ ರೀತಿ ಬದುಕಿದ್ದರು, ದೇವೇಗೌಡ ಅವರ ಜೀವನ ತೆರೆದ ಪುಸ್ತಕ. ಅದು ನಮ್ಮಗೆ ದೊಡ್ಡ ಸ್ಫೂರ್ತಿ, ಯಾವ ರೀತಿ ದಂಪತಿ ಬಾಳಿ ಬದುಕುಬೇಕು. ಹಾಗಾಗೀ ಕೈ ಮುಗಿದು ಕೇಳಿಕೊಳ್ಳುತ್ತೇನೆ, ಅವರಿಗೆ 92 ವರ್ಷ ಆಗಿದೆ, ಅವರಿಗೆ ಸಹಜವಾಗಿ ಮನಸ್ಸಿನ ಮೇಲೆ ಪ್ರಭಾವ ಬೀರುತ್ತೆ. ಒಬ್ಬರೇ ವಿಶ್ರಾಂತಿ ತೆಗೆದುಕೊಳ್ತಾ ಇದ್ದರು. ದೇವಸ್ಥಾನಕ್ಕೆ ಹೋಗಿ ಬಂದೆ ಎಂದರು. ಈ ವಿಚಾರವಾಗಿ ದೇವೆಗೌಡರು ಸಾಕಷ್ಟು ನೊಂದಿದ್ದಾರೆ, ನಮ್ಮ ಅಜ್ಜಿ ಸಹ ಬಹಳ ನೋವಿನಲ್ಲಿದ್ದಾರೆ ಎಂದು ಬೇಸರ ಹೊರ ಹಾಕಿದರು.
ಹೆಣ್ಣು ಮಕ್ಕಳ ಮುಖವನ್ನು ಬ್ಲಾರ್ ಮಾಡಿಲ್ಲವಂತೆ
ನನಗೆ ಒಂದೇ ಒಂದು ದುಃಖ ಏನು ಎಂದರೆ, ಆ ವಿಶ್ಯುವಲ್ ಏನಿದೆ ಅದನ್ನ ನಾನು ನೋಡಕ್ಕೆ ಹೋಗಿಲ್ಲ. ನನ್ನ ಆಪ್ತ ವರ್ಗದವರು ಹೇಳಿದ ಪ್ರಕಾರ, ಕನಿಷ್ಠ ಆ ವೀಡಿಯೋ ಬ್ರರ್ ಕೂಡ ಆಗಿಲ್ಲ. ಆದರೆ ಪಾಪ ಆ ಹೆಣ್ಣು ಮಕ್ಕಳ ಮುಖವನ್ನು ಓಪನ್ ಆಗಿ ತೋರಿಸ್ತಾರೆ. ಇದು ನಿಜಕ್ಕೂ ಕೂಡ ಬೇಜಾರ್ ಆಗುತ್ತೆ, ಇದರ ಬಗ್ಗೆಯೂ ಸಹ ತನಿಖೆ ಆಗಬೇಕು. ಪ್ರಕರಣ ಮುಂದಿಟ್ಟುಕೊಂಡು ದೇವೇಗೌಡ ಅವರನ್ನ ಹಾಗೂ ಕುಮಾರಸ್ವಾಮಿ ಅವರನ್ನ ತರೋದು ಸರಿಯಲ್ಲ. ಯಾರೂ ಆರೋಪಿ ಇದ್ದಾರೆ, ಯಾರು ತಪ್ಪು ಮಾಡಿದ್ದಾರೆ ಅವರಿಗೆ ಖಂಡಿತಾ ಶಿಕ್ಷೆ ಆಗಬೇಕು ಎಂದರು.