ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಬಿಜೆಪಿ ನೀಡಿದ್ದ ಜಾಹೀರಾತು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಬೆಂಗಳೂರಿನ ಹೈಗ್ರೊಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು,
ಕಾಂಗ್ರೆಸ್ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಪ್ರಕರಣ ದಾಖಲಾಗಿದೆ.ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಜಾಹಿರಾತು ಮೂಲಕ ಬಿಜೆಪಿ ಆರೋಪ ಮಾಡಿತ್ತು.