Breaking News

ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯನಿಶ್ಚಿತಾರ್ಥನವ ಜೋಡಿಗೆ ಹಾರೈಸಿದ B.S.Y.

Spread the love

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಕಾಫಿ ಡೇ ಸಿದ್ಧಾರ್ಥ್ ಹೆಗ್ಡೆ ಪುತ್ರ ಅಮರ್ಥ್ಯ ಸುಬ್ರಮಣ್ಯ ಹೆಗ್ಡೆ ನಿಶ್ಚಿತಾರ್ಥ ಅದ್ಧೂರಿಯಾಗಿ ನಡೆಯುತ್ತಿದ್ದು, ಕಡಿಮೆ ಜನರನ್ನು ಆಹ್ವಾನಿಸಿದ್ದರೂ ಸಂಭ್ರಮಕ್ಕೆ ಮಾತ್ರ ಕೊರತೆ ಇಲ್ಲ ಎಂಬಂತೆ ನಡೆಸಲಾಗುತ್ತಿದೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯುತ್ತಿದೆ. ಆಯ್ದ ಗಣ್ಯರು ಹಾಗೂ ಕುಟುಂಬಸ್ಥರು, ಸ್ನೇಹಿತರಿಗಷ್ಟೇ ಆಹ್ವಾನ ನೀಡಲಾಗಿದ್ದು, ಒಟ್ಟು 250 ಜನರನ್ನು ಆಹ್ವಾನಿಸಲಾಗಿದೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಆರ್.ಅಶೋಕ್ ಆಗಮಿಸಿ ಹಾರೈಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ.

ಉತ್ತರ ಪ್ರದೇಶದ ಖ್ಯಾತ ಜ್ಯೋತಿಷಿ ಪಂಡಿತ್ ಅವರ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಿಶ್ಚಿತಾರ್ಥ ನಡೆಯಿತು. ಬಳಿಕ ಸಿಎಂ ಆಗಮಿಸಿ ನವ ಜೋಡಿಗೆ ಹಾರೈಸಿದರು. ಸಭಾಂಗಣವೆಲ್ಲ ಗುಲಾಬಿಮಯವಾಗಿದ್ದು, ಐಶ್ವರ್ಯ ಹಾಗೂ ಅಮರ್ಥ್ಯ ಪಿಂಕ್ ಉಡುಗೆಯಲ್ಲಿ ಮಿಂಚುತ್ತಿದ್ದಾರೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿವಾಸ ಹಾಗೂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಎಂಗೇಜ್ಮೆಂಟ್ ಸಡಗರ ಮನೆ ಮಾಡಿದೆ. ಬೆಳಗ್ಗೆ 10 ಗಂಟೆಯಿಂದ ನಿಶ್ಚಿತಾರ್ಥ ಕಾರ್ಯಕ್ರಮ ಆರಂಭವಾಗಿದ್ದು, ಮಧ್ಯಾಹ್ನ 2 ಗಂಟೆ ವರೆಗೆ ನಡೆಯಲಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ