Breaking News
Home / Uncategorized / 3 ದಿನಗಳೊಳಗೆ ರೈತರ ಖಾತೆಗೆ ಪರಿಹಾರ ಮೊತ್ತ: ಸಚಿವ ಕೃಷ್ಣಬೈರೇಗೌಡ

3 ದಿನಗಳೊಳಗೆ ರೈತರ ಖಾತೆಗೆ ಪರಿಹಾರ ಮೊತ್ತ: ಸಚಿವ ಕೃಷ್ಣಬೈರೇಗೌಡ

Spread the love

ಬೆಂಗಳೂರು: ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ₹3,454.22 ಕೋಟಿಯನ್ನು ಸೋಮವಾರದಿಂದಲೇ ರೈತರ ಖಾತೆಗಳಿಗೆ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿದ್ದು, ಮುಂದಿನ 2- 3 ದಿನಗಳಲ್ಲಿ ಎಲ್ಲ ರೈತರ ಖಾತೆಗಳಿಗೂ ಹಣ ಜಮೆ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರದಿಂದ ಬಾಕಿ ಪರಿಹಾರದ ಹಣ ಪಡೆಯಲು ಕಾನೂನು ಹೋರಾಟ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಏ.26ರಂದು ₹3,454.22 ಕೋಟಿಯನ್ನು ರಾಜ್ಯಕ್ಕೆ ಬಿಡುಗಡೆ ಮಾಡಿದೆ. ಕೇಂದ್ರದಿಂದ ಹಣ ಬಿಡುಗಡೆ ಆಗುತ್ತಿದ್ದಂತೆಯೇ ಅರ್ಹ ರೈತರಿಗೆ ಪರಿಹಾರ ಪಾವತಿಸಲು ತಕ್ಷಣ ಕ್ರಮಕೈಗೊಳ್ಳಲಾಗಿದೆ. ಆದರೆ, ಏ.27 ಮತ್ತು 28 ಎರಡೂ ರಜಾದಿನಗಳು ಆಗಿದ್ದವು. ಏ.29 ಮತ್ತು 30ರಂದು ಬೆಳೆ ಹಾನಿ ಪರಿಹಾರ ವಿತರಿಸಲು ಎಲ್ಲ ತಾಂತ್ರಿಕ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿತ್ತು. ಮೇ 1 ಕಾರ್ಮಿಕರ ದಿನಾಚರಣೆ ಆಗಿದ್ದರಿಂದ ಸರ್ಕಾರಿ ರಜೆ ಇತ್ತು ಎಂದು ಅವರು ಹೇಳಿದ್ದಾರೆ.

ಮೊದಲ ಹಂತದ ಬೆಳೆ ಹಾನಿ ಪರಿಹಾರ ನೀಡಿ ಇನ್ನುಳಿದ ಬಾಕಿ ಮೊತ್ತಕ್ಕೆ ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಅರ್ಹ ರೈತರಿಗೆ ಪಾವತಿ ಮಾಡಲು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಕೇಂದ್ರದ ಹಣ ಬಿಡುಗಡೆಗೊಳಿಸಲು ಮೇ 2ರಂದು ಆದೇಶ ಹೊರಡಿಸಲಾಗಿತ್ತು ಎಂದು ಕೃಷ್ಣ ಬೈರೇಗೌಡ ವಿವರಿಸಿದ್ದಾರೆ.

ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್‌ ಮಾರ್ಗಸೂಚಿಗಳ ಅನ್ವಯ ಮೊದಲ ಹಂತದ ಪರಿಹಾರವಾಗಿ 33,58,999 ರೈತರಿಗೆ ಒಟ್ಟು ₹636.45 ಕೋಟಿಯನ್ನು ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ಪಾವತಿಸಲಾಗಿದೆ. ಈ ಪೈಕಿ ಅತಿ ಕಡಿಮೆ ಜಮೀನು ಹೊಂದಿರುವ 4,43,691 ರೈತರಿಗೆ ಎಸ್‌ಡಿಆರ್‌ಎಫ್‌ ಮಾರ್ಗಸೂಚಿ ಅನ್ವಯ ಸಂಪೂರ್ಣ ಪರಿಹಾರ ಪಾವತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇಲ್ಲಿಯವರೆಗೆ ಒಟ್ಟು 31,82,602 ರೈತರಿಗೆ ಸಂಪೂರ್ಣ ಬೆಳೆ ಹಾನಿ ಪರಿಹಾರ ಪಾವತಿಸಲಾಗಿದೆ. ಇನ್ನೂ 2 ಲಕ್ಷ ರೈತರಿಗೆ ಬರ‍ಪರಿಹಾರ ಮೊತ್ತವನ್ನು ಪಾವತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದಿದ್ದಾರೆ.


Spread the love

About Laxminews 24x7

Check Also

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Spread the love ಬೆಂಗಳೂರು: ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು ಅದರಲ್ಲಿ 548 ಗ್ರಾಮಗಳಿಗೆ ಟ್ಯಾಂಕರ್‌ಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ