ಬೆಳಗಾವಿ: ಪ್ರಜ್ವಲ್ ರೇವಣ್ಣ ವೀಡಿಯೋಗಳ ಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರು ಹಿಂದಿನಿಂದಲೂ ಕೇಳಿಬರುತ್ತಿದೆ. ಎಸ್ಐಟಿ ತನಿಖೆಯಿಂದ ನಮಗೆ ನ್ಯಾಯ ಸಿಗುವುದಿಲ್ಲ ಎಂದು ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಚುನಾವಣೆಗೂ, ಪ್ರಜ್ವಲ್ ಪ್ರಕರಣಕ್ಕೂ, ವೈರಲ್ ಆಗಿರುವ ಶಿವಕುಮಾರ್ ಆಡಿಯೋಗೂ ಸಂಬಂಧವಿಲ್ಲ. ಇದು ಬಿಜೆಪಿಯ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.