ಬೆಂಗಳೂರು: ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಧರ್ಮದೇಟು ಬಿದ್ದಿದೆ.

ಬೆಂಗಳೂರಿನ ಗಾಂಧಿನಗರದ ತ್ರಿಭವನ್ ಥೇಟರ್ ಬಳಿ ಈ ಘಟನೆ ನಡೆದಿದೆ. ವ್ಯಕ್ತಿಗೆ ಸ್ಥಳೀಯರು ಥಳಿಸುತ್ತಿರುವ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ತೆಲುಗು ಭಾಷೆ ಮಾತನಾಡುವ ವ್ಯಕ್ತಿ ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸಾರ್ವಜನಿಕರು ಆತನನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಧರ್ಮದೇಟು ಕೊಟ್ಟ ಬಳಿಕ ಸಾರ್ವಜನಿಕರೇ ಆ ವ್ಯಕ್ತಿಯನ್ನ ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ.

ಪೊಲೀಸರು ಉಪ್ಪಾರಪೇಟೆ ಠಾಣೆಗೆ ಕರೆದೊಯ್ದಿದ್ದಾರೆ.
Laxmi News 24×7