Breaking News

ಒಣಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ

Spread the love

ಬೈಲಹೊಂಗಲ: ತಾಲ್ಲೂಕಿನ ಹಿಟ್ಟಣಗಿ ಗ್ರಾಮದಿಂದ ಮೇವು ಹೊತ್ತುಕೊಂಡು ಇಂಚಲ ರಸ್ತೆ ಮಾರ್ಗವಾಗಿ ರಾಯಬಾಗ ಕಡೆ ಗೋವಿನಜೋಳದ ಒಣಮೇವು ಸಾಗಿಸುತ್ತಿದ್ದ ಮೂರು ಟ್ರ್ಯಾಕ್ಟರ್‌ಗಳಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ಒಣಮೇವು ಸುಟ್ಟು ಕರಕಲಾದ ಘಟನೆ ಇಂಚಲ ರಸ್ತೆಯ ಹತ್ತಿರ ಬುಧವಾರ ಘಟನೆ ಸಂಭವಿಸಿದೆ.

ಬೈಲಹೊಂಗಲ: ಒಣಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಸುದ್ದಿ ತಿಳಿದು ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ತಿಪ್ಪಣ್ಣಾ ನಾವದಗಿ ನೇತೃತ್ವದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು 3 ಗಂಟೆಗಳ ಕಾಲ ಹರಸಾಹಸ ಪಟ್ಟರು. ಮೇವಿಗೆ ಬೆಂಕಿ ತಗುಲಿದ್ದರಿಂದ ಸಂಕಷ್ಟದಲ್ಲಿರುವ ರೈತನ ಬದುಕಿನ ಮೇಲೆ ಗಾಯದ ಬರೆ ಎಳೆದಂತಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ