Breaking News
Home / Uncategorized / ಒಣಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಒಣಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ

Spread the love

ಬೈಲಹೊಂಗಲ: ತಾಲ್ಲೂಕಿನ ಹಿಟ್ಟಣಗಿ ಗ್ರಾಮದಿಂದ ಮೇವು ಹೊತ್ತುಕೊಂಡು ಇಂಚಲ ರಸ್ತೆ ಮಾರ್ಗವಾಗಿ ರಾಯಬಾಗ ಕಡೆ ಗೋವಿನಜೋಳದ ಒಣಮೇವು ಸಾಗಿಸುತ್ತಿದ್ದ ಮೂರು ಟ್ರ್ಯಾಕ್ಟರ್‌ಗಳಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ಒಣಮೇವು ಸುಟ್ಟು ಕರಕಲಾದ ಘಟನೆ ಇಂಚಲ ರಸ್ತೆಯ ಹತ್ತಿರ ಬುಧವಾರ ಘಟನೆ ಸಂಭವಿಸಿದೆ.

ಬೈಲಹೊಂಗಲ: ಒಣಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಸುದ್ದಿ ತಿಳಿದು ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ತಿಪ್ಪಣ್ಣಾ ನಾವದಗಿ ನೇತೃತ್ವದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು 3 ಗಂಟೆಗಳ ಕಾಲ ಹರಸಾಹಸ ಪಟ್ಟರು. ಮೇವಿಗೆ ಬೆಂಕಿ ತಗುಲಿದ್ದರಿಂದ ಸಂಕಷ್ಟದಲ್ಲಿರುವ ರೈತನ ಬದುಕಿನ ಮೇಲೆ ಗಾಯದ ಬರೆ ಎಳೆದಂತಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.


Spread the love

About Laxminews 24x7

Check Also

ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ

Spread the love ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ