Breaking News
Home / Uncategorized / ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Spread the love

ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

ತೀರ್ಥಹಳ್ಳಿ : ಹೋಟೆಲ್ ಮಂದಾರ್ತಿ ಗ್ರಾಂಡ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಆಗುಂಬೆ ಬಳಿ ನಡೆದಿದೆ.

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಎಂಬಾತ ಕ್ಯಾಂಟರ್ ಒಳಗೆ ಮಲಗಿದ್ದರು.

ಈ ವೇಳೆ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಲ್ಮಾನ್ ಸ್ಥಳದಲ್ಲೇ ಪ್ರಾಣ ಬಿಟ್ಟರೆ ಡ್ರೈವರ್ ಗೆ ಗಂಭೀರ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ಆಗುಂಬೆಯಿಂದ ತೀರ್ಥಹಳ್ಳಿಗೆ ಕ್ಯಾಂಟರ್ ಬರುವ ವೇಳೆ ಈ ದುರ್ಘಟನೆ ನಡೆದಿದೆ. ಕ್ಯಾಂಟರ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಸಲ್ಮಾನ್ ಮೃತದೇಹ ತೀರ್ಥಹಳ್ಳಿಯ ಶವಾಗಾರದಲ್ಲಿ ಇರಿಸಲಾಗಿದ್ದು ತೀರ್ಥಹಳ್ಳಿ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.


Spread the love

About Laxminews 24x7

Check Also

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಪ್ರೇಮಿ ಅರೆಸ್ಟ್‌!

Spread the love ಬೆಂಗಳೂರು: ಇಂಧನ ಟ್ಯಾಂಕ್ ಮೇಲೆ ಕುಳಿತಿದ್ದ ಮಹಿಳೆಯೊಂದಿಗೆ ಬೈಕ್ ಸವಾರಿ ಮಾಡುತ್ತಿರುವ ಯುವಕನನ್ನು ಹೆಬ್ಬಾಳ ಸಂಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ