Breaking News
Home / Uncategorized / ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Spread the love

ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕಾಗಿ ದೇಶವನ್ನು ಒಡೆಯಲು ಸಹ ಹೇಸುವುದಿಲ್ಲ. ಇಂಡಿ ಒಕ್ಕೂಟದ ಹೇಳಿಕೆಗಳನ್ನು ನೋಡಿದರೆ ಸ್ಪಷ್ಟವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಸ್ಯಾಮ್ ಪಿತ್ರೊಡಾ ನೀಡಿದ್ದಾರೆ ಎನ್ನಲಾದ ಜನಾಂಗಿ ದ್ವೇಷದ ಹೇಳಿಕೆ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಹಾಗೂ ಐಎನ್ ಡಿಐಎ ಒಕ್ಕೂಟಕ್ಕೆ ದೇಶದ ಒಗ್ಗಟ್ಟಾಗಿರುವುದು ಇಷ್ಟವಿಲ್ಲ ಎಂದು ಹರಿಹಾಯ್ದರು.

 

ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ ದಕ್ಷಿಣ ಭಾರತ ಬೇರೆಯಾಗಬೇಕು, ಶ್ಯಾಮ್ ಪಿತ್ರೋಡಾ ಅವರು ಮನುಷ್ಯನ ಬಣ್ಣದ ಮೇಲೆ ಹೇಳಿಕೆ ನೀಡುತ್ತಿದ್ದಾರೆ. ದ್ರಾವಿಡ ಚಳುವಳಿಯಿಂದಾಗಿ ನಾವು ದ್ರಾವಿಡರು ಬೇರೆ ಎನ್ನುವ ಹೇಳಿಕೆ ನೀಡುತ್ತಿದ್ದಾರೆ. ಜನಾಂಗಿಯ ಆಧಾರದ ಮೇಲೆ ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲದಿದ್ದರೆ ದೇಶದ ಒಡೆಯುವುದಕ್ಕೂ ಹೇಸುವುದಿಲ್ಲ ಎಂಬುವುದು ಈ ಘಟನೆಗಳಿಂದ ಸ್ಪಷ್ಟವಾಗುತ್ತದೆ ಎಂದರು.


Spread the love

About Laxminews 24x7

Check Also

ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಬೈಕ್ ಚಾಲನೆ ಮಾಡಿದ್ದ ಪ್ರೇಮಿ ಅರೆಸ್ಟ್‌!

Spread the love ಬೆಂಗಳೂರು: ಇಂಧನ ಟ್ಯಾಂಕ್ ಮೇಲೆ ಕುಳಿತಿದ್ದ ಮಹಿಳೆಯೊಂದಿಗೆ ಬೈಕ್ ಸವಾರಿ ಮಾಡುತ್ತಿರುವ ಯುವಕನನ್ನು ಹೆಬ್ಬಾಳ ಸಂಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ