ಬೆಂಗಳೂರು, ಮೇ 10: ಹಾಸನ ಸಂಸಂದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣ ಮೈತ್ರಿ ನಾಯಕರು ಮುಜುಗರವನ್ನುಂಟು ಮಾಡಿದೆ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರು ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇದೀಗ ಮೈತ್ರಿ ಕುರಿತು ಅಪಸ್ವರಗಳು ಕೇಳಿ ಬರುತ್ತಿವೆ.
ಹೌದು, ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದಿಂದ ಕಮಲ-ದಳ ನಾಯಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಈ ಪ್ರಕರಣ ಲೋಕಸಭಾ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಮಾತುಗಳು ಕೇಳಿ ಬಂದಿವೆ. ಆರಂಭದಲ್ಲಿಯೇ ಮೈತ್ರಿ ಕುರಿತು ಬಿಜೆಪಿಯ ಕೆಲವು ಭಾಗದ ನಾಯಕರು ತೀವ್ರ ವಿರೋಧವನ್ನ ಅನುಭವಿಸಿದ್ರು, ಇದೀಗ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಿಂದ ಮೈತ್ರಿ ಮುಂದುವರಿಕೆ ಕುರಿತು ಅಪಸ್ವರಗಳು ಕೇಳಿ ಬರುತ್ತಿವೆ.