Breaking News

ರಸ್ತೆ ಮಧ್ಯೆ ವಾಹನ ಅಡ್ಡಗಟ್ಟಿ ದರೋಡೆ ಮಾಡಿದ್ ಪ್ರಕರಣವನ್ನ ಕೆಲವೇ ಗಂಟೆಗಳಲ್ಲಿ ಮಾನ್ವಿ ಠಾಣೆ ಪೊಲೀಸರು ಭೇದಿಸಿ ಆರೋಪಿಗಳನ್ನ ಬಂಧಿಸಿದ್ದಾರೆ.

Spread the love

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಓಮಿನಿ ವಾಹನವನ್ನ ಅಡ್ಡಗಟ್ಟಿ ದರೋಡೆ ಮಾಡಿದ್ದ ಪ್ರಕರಣವನ್ನ ಕೆಲವೇ ಗಂಟೆಗಳಲ್ಲಿ ಮಾನ್ವಿ ಠಾಣೆ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನ ಬಂಧಿಸಿದ್ದಾರೆ.

ರಾಯಚೂರು ಮಾನ್ವಿ ಮಧ್ಯೆ ರಸ್ತೆಯಲ್ಲಿ ಓಮಿನಿ ವಾಹನ ಅಡ್ಡಗಟ್ಟಿ ದರೋಡೆ ಮಾಡಿದ್ದ ಶೇಕ್ ಅಬ್ದುಲ್, ಗುರುಕುಮಾರ್, ಸೈಯದ್ ಹಕೀಂ ,ಅಸ್ಲಾಂ ಷಾ ಹಾಗೂ ದರೋಡೆಗೆ ಸಾಥ್ ನೀಡಿದ್ದ ಓಮಿನಿ ಚಾಲಕ ಗುರುರಾಜನನ್ನ ಬಂಧಿಸಲಾಗಿದೆ

ನಾಲ್ಕು ಜನರ ತಂಡ ವಾಹನವನ್ನ ಅಡ್ಡಗಟ್ಟಿ 5 ಲಕ್ಷ ಮೌಲ್ಯದ ಚಿನ್ನಾಭರಣ, 20 ಸಾವಿರ ನಗದು, 15 ಸಾವಿರ ರೂಪಾಯಿ ಮೌಲ್ಯದ ಮೊಬೈಲ್ ದರೋಡೆ ಮಾಡಿದ್ದರು. ದೂರು ದಾಖಲಿಸಿರುವ ಲಕ್ಷ್ಮಿದೇವಿ ಹಾಗೂ ಇನ್ನಿಬ್ಬರು ವಾಹನದಲ್ಲಿ ಮಾನ್ವಿ ಕಡೆಗೆ ಹೊರಟಿದ್ದಾಗ ದರೋಡೆ ನಡೆದಿತ್ತು.


Spread the love

About Laxminews 24x7

Check Also

ಗಡಿ ವಿವಾದದಿಂದಾಗಿ ಮತ್ತೆ ಮಹಾರಾಷ್ಟ್ರ ಅಲರ್ಟ್

Spread the loveಬೆಳಗಾವಿ : ಗಡಿ ಸಚಿವರಾಗಿ ಹೆಚ್. ಕೆ. ಪಾಟೀಲ್ ಅವರನ್ನು ಕರ್ನಾಟಕ ಸರ್ಕಾರ ನೇಮಿಸುತ್ತಿದ್ದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ