Breaking News

ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Spread the love

ಬೆಳಗಾವಿ: ಬಿಸಿಲಿನಿಂದ ಬಸವಳಿದಿದ್ದ ಬೆಳಗಾವಿ ಜನತೆಗೆ ಶನಿವಾರ ಮಳೆರಾಯ ತಂಪೆರೆದಿದ್ದು, ಮಳೆ ಆಗಮನದಿಂದ ಜನರು, ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಯಿತು.

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

ಬರದಿಂದ ತತ್ತರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆಗಮನದಿಂದ ಸಾರ್ವಜನಿಕರು ಸಮಾಧಾನವಾಗಿದ್ದಾರೆ.

ಭಾರೀ ಮಳೆ ಆಗಮನದಿಂದ ಇಳೆ ತಂಪಾಗಿದ್ದು, ರೈತರ ಮೊಗದಲ್ಲಿ ಸಂತಸವಾಗಿದೆ. ಈ ವರ್ಷದ ಅತ್ಯಂತ ಜೋರಾದ ಮಳೆ ಸುರಿದಿದೆ.

ಮಧ್ಯಾಹ್ನ 4 ಗಂಟೆ ನಂತರ ನಗರದಲ್ಲಿ ಆರಂಭವಾದ ಬಿರುಗಾಳಿ-ಮಳೆಗೆ ಜನರು ಪರದಾಡಿದರು. ಸುಮಾರು ಒಂದೂವರೆ ತಾಸಿಗೂ ಹೆಚ್ಚು ಹೊತ್ತು ಮಳೆ ಸುರಿಯಿತು. ಜೋರಾಗಿ ಬೀಸಿದ ಬಿರುಗಾಳಿಯಿಂದ ಗಿಡದ ಟೊಂಗೆಗಳು ಮುರಿದು ಬಿದ್ದವು. ಗುಡುಗು-ಸಿಡಿಲು ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು. ಭೇಂಡಿ ಬಜಾರ್‌ನಲ್ಲಿ ಗಿಡವೊಂದು ಧರೆಗುರುಳಿದೆ.


Spread the love

About Laxminews 24x7

Check Also

ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ ಸ್ಪರ್ಧೆ; ಅಜೀತ್ ಸಿದ್ಧನ್ನವರ

Spread the love ಜ.19 ರಂದು ’12ನೇ ಸತೀಶ್ ಶುಗರ್ಸ್ ಕ್ಲಾಸಿಕ್-2026′ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬೃಹತ್ ದೇಹದಾರ್ಢ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ