Breaking News

ಸರ್ಕಾರಿ ಜಮೀನು ವಿವಾದದಿಂದ ಪಿಡಿಓ ವಾಹನಕ್ಕೆ ಬೆಂಕಿ ಇಟ್ಟ ಘಟನೆ

Spread the love

ಚಿಕ್ಕಮಗಳೂರು: ಸರ್ಕಾರಿ ಜಮೀನು ವಿವಾದದಿಂದ ಪಿಡಿಓ ವಾಹನಕ್ಕೆ ಬೆಂಕಿ ಇಟ್ಟ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ಬಾಸಾಪುರ ಗ್ರಾಮದಲ್ಲಿ ನಡೆದಿದೆ.

ಬಗರ್ ಹುಕುಂ ಜಮೀನಿಗಾಗಿ 2 ಕುಟುಂಬಗಳ ನಡುವೆ ಕಲಹ ಉಂಟಾಗಿದ್ದು, ಜಮೀನಿನಲ್ಲೇ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಸಂಬಂಧ ಪೊಲೀಸರು ಭದ್ರಾವತಿ ತಾಲೂಕಿನ ಪಿಡಿಓ ಹನುಮಂತಪ್ಪನನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್.ಪಿ ಅಕ್ಷಯ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಂಭೈನೂರು ಗ್ರಾಮದಲ್ಲಿ ಬೂದಿಮುಚ್ಚಿದ ವಾತಾವರಣ ನಿರ್ಮಾಣವಾಗಿದೆ. ಶಂಬೈನೂರು ಗ್ರಾಮದಲ್ಲಿ ಕೆ.ಎಸ್.ಆರ್.ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಬಾಲಕಿಗೆ ಲೈಂಗಿಕ ಕಿರುಕುಳ; ಇಬ್ಬರು ಆಟೋ ಚಾಲಕರ ಬಂಧನ

Spread the loveದಾವಣಗೆರೆ: ಆಟೋ‌ ಚಾಲಕರಿಬ್ಬರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದ ಆರ್​ಎಂಸಿ ಯಾರ್ಡ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ